Categories: ರಾಜ್ಯ

ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಒತ್ತಾಯಿಸದ ರಾಜ್ಯ ಬಿಜೆಪಿ- ಅಕ್ಕಿ ಕೊಡಲು ಆಗದಿದ್ದರೆ ಹಣ ಕೊಡಿ‌ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಜಿಜೆಪಿ ನಾಯಕರು; ಇದು ಅವರ ನೈಜ ಮುಖ; ಸಿಎಂ‌ ಸಿದ್ದರಾಮಯ್ಯ ಕಿಡಿ

5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ.

ಇದು ರಾಜ್ಯ ಬಿಜೆಪಿ ನಾಯಕರ ನೈಜ ಮುಖ. ಅವರಿಗೆ ಬಡವರಿಗೆ ಅಕ್ಕಿ ನೀಡುವುದಕ್ಕಿಂತ ಅನ್ನಭಾಗ್ಯ ಕಾರ್ಯಕ್ರಮ ಜಾರಿಯಾಗಬಾರದು ಎಂಬುದರಲ್ಲೇ ಹೆಚ್ಚು ಖುಷಿ ಸಿಗುತ್ತದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ, ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೆವು. ಎನ್.ಸಿ.ಸಿ.ಎಫ್, ನಫೆಟ್ ಹಾಗೂ ಕೇಂದ್ರೀಯ ಭಂಡಾರಗಳನ್ನು ಸಂಪರ್ಕಿಸಿದ್ದೆವು. ಅವರು ಕೂಡ ಹೆಚ್ಚು ಬೆಲೆ ನಮೂದಿಸಿದರು. ಆದ್ದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆಯಲು ನಿರ್ಧರಿಸಿದ್ದೇವೆ.

ನಾವು ಜುಲೈ ಒಂದರಿಂದ ಬಡವರಿಗೆ 10 ಕೆ.ಜಿ ಆಹಾರಧಾನ್ಯ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದೆವು. ನಮಗೆ ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದ್ದು ಇಷ್ಟು ಪ್ರಮಾಣದ ಅಕ್ಕಿಯನ್ನು ಬೇರೆ ರಾಜ್ಯಗಳು ನೀಡಲು ಸಿದ್ಧವಿಲ್ಲವರುವುದರಿಂದ ನಾವು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಪೂರೈಕೆಯಾಗುವ ವರೆಗೆ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆ.ಜಿ ಗೆ ರೂ.34 ರಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ.

ನಾವು ನೀಡಿದ್ದ ವಾಗ್ದಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸರ್ಕಾರದ ನಡೆ ಪಾರದರ್ಶಕವಾಗಿರಲಿ ಎಂದು ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಖರೀದಿಸಿ ಮುಂದಿನ ದಿನಗಳಲ್ಲಿ ತಲಾ 10 ಕೆ.ಜಿ ಅಕ್ಕಿಯನ್ನು ವಿತರಿಸುತ್ತೇವೆ. ಈ ಪ್ರಕ್ರಿಯೆಗೆ ಕೆಲ ಸಮಯ ಬೇಕಿರುವುದರಿಂದ ಜುಲೈ ಒಂದರಿಂದ ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿರುವ 5 ಕೆ.ಜಿ ಅಕ್ಕಿಯ ಬದಲಿಗೆ ತಲಾ ರೂ.170 ನಂತೆ ಹಣ ನೀಡುತ್ತೇವೆ ಎಂದು ತಿಳಿಸಿರುವ ಸಿಎಂ ಸಿದ್ದರಾಮಯ್ಯ.

Ramesh Babu

Journalist

Recent Posts

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

2 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

17 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

21 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

22 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

23 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

24 hours ago