Categories: ರಾಜ್ಯ

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಪ್ರಧಾನಿ ಮೋದಿಯವರೇ ಉತ್ತರಿಸಬೇಕು- ಬಿಜೆಪಿಯ ಐಟಿ ಸೆಲ್ ಅಲ್ಲ- ಸಿಎಂ ಸಿದ್ದರಾಮಯ್ಯ

ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ.  ಪ್ರಧಾನಿಯವರು ಒಪ್ಪಿದ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ  ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ.. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ.

ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು ಎಂದಿದ್ದಾರೆ.

ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು.  ಹದಿನೆಂಟು ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್‌ ಅರ್ಬನ್‌ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ‍್ಳಲಾಗಿದೆ ಎಂದು ಹೇಳಿದ್ದಾರೆ.

ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

7 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

10 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

11 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

21 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago