Categories: ರಾಜ್ಯ

ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಕುರಿತು ಪ್ರಧಾನಿ ಮೋದಿಯವರೇ ಉತ್ತರಿಸಬೇಕು- ಬಿಜೆಪಿಯ ಐಟಿ ಸೆಲ್ ಅಲ್ಲ- ಸಿಎಂ ಸಿದ್ದರಾಮಯ್ಯ

ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ.  ಪ್ರಧಾನಿಯವರು ಒಪ್ಪಿದ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ  ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ.. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ.

ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು ಎಂದಿದ್ದಾರೆ.

ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು.  ಹದಿನೆಂಟು ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್‌ ಅರ್ಬನ್‌ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ‍್ಳಲಾಗಿದೆ ಎಂದು ಹೇಳಿದ್ದಾರೆ.

ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago