ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಪ್ರಧಾನಿಯವರು ಒಪ್ಪಿದ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ.. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ.
ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು ಎಂದಿದ್ದಾರೆ.
ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು. ಹದಿನೆಂಟು ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ.
ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…