ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ: ಕೇಂದ್ರದಿಂದ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು ಸರಿಯೆಂದು ಬಿಜೆಪಿಯವರು ಹೇಳುತ್ತಾರೆಯೇ? ನಿನ್ನೆಯ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯ ತನ್ನ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದನ್ನು ದೇಶ ವಿಭಜನೆ ಮಾಡುವ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರತಿಭಟನೆ ಮಾಡಿದ ರಾಜ್ಯದ ನಡೆಯನ್ನು ಟೀಕಿಸಿದ ಮೋದಿಯವರು, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ, ಗುಜರಾತ್ ರಾಜ್ಯಕ್ಕೆ ಸಾಕಷ್ಟು ಅನುದಾನ ಹಂಚಿಕೆಯಾಗುತ್ತಿಲ್ಲವೆಂದೂ ಅಂದಿನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಾ, ‘60 ಸಾವಿರ ಕೋಟಿ ತೆರಿಗೆ ನೀಡುವ ಗುಜರಾತ್ ರಾಜ್ಯಕ್ಕೆ ಅನುದಾನ ಮರಳಿ ಬರುತ್ತಿಲ್ಲ, ಗುಜರಾತ್ ಭಿಕ್ಷೆ ಬೇಡುವ ರಾಜ್ಯವೇ? ಅಥವಾ ನಾವು ಭಿಕ್ಷುಕರೇ, ನಾವು ದೆಹಲಿಯಲ್ಲಿರುವವರ ಕರುಣೆಯ ಮೇಲೆ ಬದುಕಬೇಕೇ?’ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ, 2008 ರಲ್ಲಿ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಗುಜರಾತ್ ರಾಜ್ಯ 40 ಸಾವಿರ ಕೋಟಿ ತೆರಿಗೆ ನೀಡಿದರೂ, ಕೇಂದ್ರದಿಂದ  ಕೇವಲ 2.5 ರಷ್ಟು ಅನುದಾನ ಬರುತ್ತಿದೆ. ಇಂತಹ ಕನಿಷ್ಟ ಪ್ರಮಾಣದ ಅನುದಾನ ನೀಡುವ ಬದಲು ಒಂದು ವರ್ಷಗಳ ವರೆಗೆ ಗುಜರಾತ್ ನಿಂದ ತೆರಿಗೆ ಪಡೆಯುವುದನ್ನು ಬಿಟ್ಟುಕೊಡಲಿ’  ಎಂದು ಹೇಳಿದ್ದರು. ಈ ರೀತಿ ಮಾತನಾಡಿದ ಮೋದಿಯವರು, ನಾವು ಪ್ರತಿಭಟನೆ ಮಾಡಿದರೆ ಭಾರತವನ್ನು ಒಡೆಯಲಾಗುತ್ತಿದ್ದೆ ಎಂದು ಟೀಕಿಸುತ್ತಿದ್ದಾರೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ, ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು ರೀತಿಯ ಧೋರಣೆ ಹೊಂದಿರುವ ಪ್ರಧಾನಿ ಮೋದಿಯವರ ಮಾತಿಗೆ ಕಿಮ್ಮತ್ತಿರಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು ರಾಜ್ಯದ ಹಾಗೂ ಕನ್ನಡಿಗರ ಹಿತರಕ್ಷಣೆ ಮಾಡಲು ನಮ್ಮ ಉದ್ದೇಶವಾಗಿದೆ. ಕರ್ನಾಟಕದಿಂದ 4,30,000 ಕೋಟಿ ತೆರಿಗೆ ಕೇಂದ್ರಕ್ಕೆ ಹೋಗಿದೆ. ಆದರೆ ನಮಗೆ 52,257 ಕೋಟಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತದೆ. ಅಂದರೆ 100 ರೂ. ರಲ್ಲಿ ಕೇವಲ 13 ರೂ. ರಾಜ್ಯಕ್ಕೆ ಬರುತ್ತಿದೆ. ಈ ಅನ್ಯಾಯವನ್ನು ನಾವು ಪ್ರಶ್ನಿಸುತ್ತಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುವುದಾಗಿ ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಹೇಳಿದ್ದರು. ಆದರೆ ಹೇಳಿದ್ದ ಅನುದಾನ ಇನ್ನೂ ನೀಡಿಲ್ಲ. ರಾಜ್ಯಕ್ಕೆ 11,495 ಕೋಟಿ ವಿಶೇಷ ಅನುದಾನ ರಾಜ್ಯಕ್ಕೆ ನೀಡಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲವೆಂದ ಕೇಂದ್ರ ವಿತ್ತಸಚಿವೆ, ಆಯೋಗದ ಶಿಫಾರಸ್ಸನ್ನು ಅಲ್ಲಗೆಳೆದು ರಾಜ್ಯಕ್ಕೆ ನೀಡುವ ಈ ಮೊತ್ತವನ್ನು ನೀಡಲು ನಿರಾಕರಿಸಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ  ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

5 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

12 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

15 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

15 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago