ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ: ಕೇಂದ್ರದಿಂದ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು ಸರಿಯೆಂದು ಬಿಜೆಪಿಯವರು ಹೇಳುತ್ತಾರೆಯೇ? ನಿನ್ನೆಯ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯ ತನ್ನ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದನ್ನು ದೇಶ ವಿಭಜನೆ ಮಾಡುವ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರತಿಭಟನೆ ಮಾಡಿದ ರಾಜ್ಯದ ನಡೆಯನ್ನು ಟೀಕಿಸಿದ ಮೋದಿಯವರು, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ, ಗುಜರಾತ್ ರಾಜ್ಯಕ್ಕೆ ಸಾಕಷ್ಟು ಅನುದಾನ ಹಂಚಿಕೆಯಾಗುತ್ತಿಲ್ಲವೆಂದೂ ಅಂದಿನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಾ, ‘60 ಸಾವಿರ ಕೋಟಿ ತೆರಿಗೆ ನೀಡುವ ಗುಜರಾತ್ ರಾಜ್ಯಕ್ಕೆ ಅನುದಾನ ಮರಳಿ ಬರುತ್ತಿಲ್ಲ, ಗುಜರಾತ್ ಭಿಕ್ಷೆ ಬೇಡುವ ರಾಜ್ಯವೇ? ಅಥವಾ ನಾವು ಭಿಕ್ಷುಕರೇ, ನಾವು ದೆಹಲಿಯಲ್ಲಿರುವವರ ಕರುಣೆಯ ಮೇಲೆ ಬದುಕಬೇಕೇ?’ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ, 2008 ರಲ್ಲಿ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಗುಜರಾತ್ ರಾಜ್ಯ 40 ಸಾವಿರ ಕೋಟಿ ತೆರಿಗೆ ನೀಡಿದರೂ, ಕೇಂದ್ರದಿಂದ  ಕೇವಲ 2.5 ರಷ್ಟು ಅನುದಾನ ಬರುತ್ತಿದೆ. ಇಂತಹ ಕನಿಷ್ಟ ಪ್ರಮಾಣದ ಅನುದಾನ ನೀಡುವ ಬದಲು ಒಂದು ವರ್ಷಗಳ ವರೆಗೆ ಗುಜರಾತ್ ನಿಂದ ತೆರಿಗೆ ಪಡೆಯುವುದನ್ನು ಬಿಟ್ಟುಕೊಡಲಿ’  ಎಂದು ಹೇಳಿದ್ದರು. ಈ ರೀತಿ ಮಾತನಾಡಿದ ಮೋದಿಯವರು, ನಾವು ಪ್ರತಿಭಟನೆ ಮಾಡಿದರೆ ಭಾರತವನ್ನು ಒಡೆಯಲಾಗುತ್ತಿದ್ದೆ ಎಂದು ಟೀಕಿಸುತ್ತಿದ್ದಾರೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ, ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು ರೀತಿಯ ಧೋರಣೆ ಹೊಂದಿರುವ ಪ್ರಧಾನಿ ಮೋದಿಯವರ ಮಾತಿಗೆ ಕಿಮ್ಮತ್ತಿರಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು ರಾಜ್ಯದ ಹಾಗೂ ಕನ್ನಡಿಗರ ಹಿತರಕ್ಷಣೆ ಮಾಡಲು ನಮ್ಮ ಉದ್ದೇಶವಾಗಿದೆ. ಕರ್ನಾಟಕದಿಂದ 4,30,000 ಕೋಟಿ ತೆರಿಗೆ ಕೇಂದ್ರಕ್ಕೆ ಹೋಗಿದೆ. ಆದರೆ ನಮಗೆ 52,257 ಕೋಟಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತದೆ. ಅಂದರೆ 100 ರೂ. ರಲ್ಲಿ ಕೇವಲ 13 ರೂ. ರಾಜ್ಯಕ್ಕೆ ಬರುತ್ತಿದೆ. ಈ ಅನ್ಯಾಯವನ್ನು ನಾವು ಪ್ರಶ್ನಿಸುತ್ತಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುವುದಾಗಿ ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಹೇಳಿದ್ದರು. ಆದರೆ ಹೇಳಿದ್ದ ಅನುದಾನ ಇನ್ನೂ ನೀಡಿಲ್ಲ. ರಾಜ್ಯಕ್ಕೆ 11,495 ಕೋಟಿ ವಿಶೇಷ ಅನುದಾನ ರಾಜ್ಯಕ್ಕೆ ನೀಡಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲವೆಂದ ಕೇಂದ್ರ ವಿತ್ತಸಚಿವೆ, ಆಯೋಗದ ಶಿಫಾರಸ್ಸನ್ನು ಅಲ್ಲಗೆಳೆದು ರಾಜ್ಯಕ್ಕೆ ನೀಡುವ ಈ ಮೊತ್ತವನ್ನು ನೀಡಲು ನಿರಾಕರಿಸಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ  ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

17 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago