ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ: ಕೇಂದ್ರದಿಂದ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು ಸರಿಯೆಂದು ಬಿಜೆಪಿಯವರು ಹೇಳುತ್ತಾರೆಯೇ? ನಿನ್ನೆಯ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯ ತನ್ನ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದನ್ನು ದೇಶ ವಿಭಜನೆ ಮಾಡುವ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರತಿಭಟನೆ ಮಾಡಿದ ರಾಜ್ಯದ ನಡೆಯನ್ನು ಟೀಕಿಸಿದ ಮೋದಿಯವರು, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ, ಗುಜರಾತ್ ರಾಜ್ಯಕ್ಕೆ ಸಾಕಷ್ಟು ಅನುದಾನ ಹಂಚಿಕೆಯಾಗುತ್ತಿಲ್ಲವೆಂದೂ ಅಂದಿನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಾ, ‘60 ಸಾವಿರ ಕೋಟಿ ತೆರಿಗೆ ನೀಡುವ ಗುಜರಾತ್ ರಾಜ್ಯಕ್ಕೆ ಅನುದಾನ ಮರಳಿ ಬರುತ್ತಿಲ್ಲ, ಗುಜರಾತ್ ಭಿಕ್ಷೆ ಬೇಡುವ ರಾಜ್ಯವೇ? ಅಥವಾ ನಾವು ಭಿಕ್ಷುಕರೇ, ನಾವು ದೆಹಲಿಯಲ್ಲಿರುವವರ ಕರುಣೆಯ ಮೇಲೆ ಬದುಕಬೇಕೇ?’ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ, 2008 ರಲ್ಲಿ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಗುಜರಾತ್ ರಾಜ್ಯ 40 ಸಾವಿರ ಕೋಟಿ ತೆರಿಗೆ ನೀಡಿದರೂ, ಕೇಂದ್ರದಿಂದ  ಕೇವಲ 2.5 ರಷ್ಟು ಅನುದಾನ ಬರುತ್ತಿದೆ. ಇಂತಹ ಕನಿಷ್ಟ ಪ್ರಮಾಣದ ಅನುದಾನ ನೀಡುವ ಬದಲು ಒಂದು ವರ್ಷಗಳ ವರೆಗೆ ಗುಜರಾತ್ ನಿಂದ ತೆರಿಗೆ ಪಡೆಯುವುದನ್ನು ಬಿಟ್ಟುಕೊಡಲಿ’  ಎಂದು ಹೇಳಿದ್ದರು. ಈ ರೀತಿ ಮಾತನಾಡಿದ ಮೋದಿಯವರು, ನಾವು ಪ್ರತಿಭಟನೆ ಮಾಡಿದರೆ ಭಾರತವನ್ನು ಒಡೆಯಲಾಗುತ್ತಿದ್ದೆ ಎಂದು ಟೀಕಿಸುತ್ತಿದ್ದಾರೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ, ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು ರೀತಿಯ ಧೋರಣೆ ಹೊಂದಿರುವ ಪ್ರಧಾನಿ ಮೋದಿಯವರ ಮಾತಿಗೆ ಕಿಮ್ಮತ್ತಿರಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು ರಾಜ್ಯದ ಹಾಗೂ ಕನ್ನಡಿಗರ ಹಿತರಕ್ಷಣೆ ಮಾಡಲು ನಮ್ಮ ಉದ್ದೇಶವಾಗಿದೆ. ಕರ್ನಾಟಕದಿಂದ 4,30,000 ಕೋಟಿ ತೆರಿಗೆ ಕೇಂದ್ರಕ್ಕೆ ಹೋಗಿದೆ. ಆದರೆ ನಮಗೆ 52,257 ಕೋಟಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತದೆ. ಅಂದರೆ 100 ರೂ. ರಲ್ಲಿ ಕೇವಲ 13 ರೂ. ರಾಜ್ಯಕ್ಕೆ ಬರುತ್ತಿದೆ. ಈ ಅನ್ಯಾಯವನ್ನು ನಾವು ಪ್ರಶ್ನಿಸುತ್ತಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುವುದಾಗಿ ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಹೇಳಿದ್ದರು. ಆದರೆ ಹೇಳಿದ್ದ ಅನುದಾನ ಇನ್ನೂ ನೀಡಿಲ್ಲ. ರಾಜ್ಯಕ್ಕೆ 11,495 ಕೋಟಿ ವಿಶೇಷ ಅನುದಾನ ರಾಜ್ಯಕ್ಕೆ ನೀಡಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲವೆಂದ ಕೇಂದ್ರ ವಿತ್ತಸಚಿವೆ, ಆಯೋಗದ ಶಿಫಾರಸ್ಸನ್ನು ಅಲ್ಲಗೆಳೆದು ರಾಜ್ಯಕ್ಕೆ ನೀಡುವ ಈ ಮೊತ್ತವನ್ನು ನೀಡಲು ನಿರಾಕರಿಸಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ  ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

3 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

5 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago