ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಹೇಳಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ’ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ರಾಜ್ಯ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ, ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಎದುರು ನೋಡಲಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

15 minutes ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

4 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

7 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

2 days ago