ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಹೇಳಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ’ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ರಾಜ್ಯ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ, ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಎದುರು ನೋಡಲಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 hour ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago