ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಹೇಳಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ’ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ರಾಜ್ಯ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ, ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಎದುರು ನೋಡಲಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

5 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

6 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

7 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

8 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

15 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago