ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಹೇಳಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ’ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ರಾಜ್ಯ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ, ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಎದುರು ನೋಡಲಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

10 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

10 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

15 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

19 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

23 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 days ago