Categories: ಕ್ರೀಡೆ

ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದ ಉಮಾ ಕಾರ್ತಿಕ್ ಪಾಟಿಬಂಡ್ಲ

ಬೆಂಗಳೂರು : ಜ್ಞಾನಭಾರತಿ ಅವರಣದಲ್ಲಿರುವ ಸ್ಪೋರ್ಟ್ಸ್‌ ಅಥಾರಿಟಿ ಆಫ್ ಇಂಡಿಯಾ (SAI) ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವೈಯಕ್ತಿಕವಾಗಿ ನಾಲ್ಕು ಪದಕವನ್ನ ಪಡೆದಿದ್ದಾರೆ.

ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ 10 ವರ್ಷದ ಬಾಲಕ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

10 ಮೀಟರ್ ಏರ್ ರೈಫಲ್ ನಲ್ಲಿ 400 ಪಾಯಿಂಟ್ಸ್ ಗಳಲ್ಲಿ 363 ಪಾಯಿಂಟ್ಸ್ ಗಳಿಸುವ ಮೂಲಕ 4 ಪದಕಗಳನ್ನ ಪಡೆದಿದ್ದಾರೆ. ವೈಯಕ್ತಿಕವಾಗಿ ಚಿನ್ನ, ಯುವಕರ ವಿಭಾಗದಲ್ಲಿ ಚಿನ್ನ, ಯುವಕರ ತಂಡದಲ್ಲಿ ಚಿನ್ನ ಹಾಗೂ ಉಪ ಯುವಕರ ತಂಡದಲ್ಲಿ ಬೆಳ್ಳಿ ಪದಕವನ್ನ ಪಡೆದಿದ್ದಾರೆ. ಈ ಸಾಧನೆಯ ಮೂಲಕ ಉಮಾ ಕಾರ್ತಿಕ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹಾಕ್-ಐ ರೈಫಲ್ ಅಂಡ್ ಶೂಟಿಂಗ್ ಅಕಾಡೆಮಿಯಲ್ಲಿ ಶೂಟಿಂಗ್ ತರಬೇತಿಯನ್ನ ಪಡೆಯುತ್ತಿದ್ದು, ತರಬೇತಿದಾರರಾದ ಶರಣೇಂದ್ರ ಕೆ.ವೈ ರವರ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಾಗಿ ತಯಾರಿ ನಡೆಸಿದ್ದಾರೆ.

ಉಮಾ ಕಾರ್ತಿಕ್ 2028ರಲ್ಲಿ ಲಾಸ್ ಎಂಜಲೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಶೂಟಿಂಗ್ ವಿಭಾಗದಲ್ಲಿ ಭಾರತ ದೇಶದ ಪರವಾಗಿ ಸ್ಪರ್ಧಿಸುವ ಕನಸು ಕಂಡಿದ್ದಾರೆ.

ಈಗಾಗಲೇ ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದಿರುವ ಇವರು, ಮಾರ್ಕ್ ಮ್ಯಾನ್ ಶಿಪ್ ಸ್ಪೋರ್ಟ್ಸ್ ಶೂಟಿಂಗ್ ಚಾಂಪಿಯನ್ ಶಿಪ್ 2024 ನಲ್ಲಿ ಪ್ರತಿಷ್ಠಿತ ಎರಡು ಬೆಳ್ಳಿ ಪದಕ, ಮಿನಿ ಒಲಿಪಿಂಕ್ಸ್ 2024 ರಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಕರ್ನಾಟಕ ಅತ್ಯಂತ ಕಿರಿಯ ಶೂಟರ್ ಖ್ಯಾತಿಯನ್ನ ಗಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

8 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

16 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

16 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

22 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago