Categories: ಕ್ರೀಡೆ

ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದ ಉಮಾ ಕಾರ್ತಿಕ್ ಪಾಟಿಬಂಡ್ಲ

ಬೆಂಗಳೂರು : ಜ್ಞಾನಭಾರತಿ ಅವರಣದಲ್ಲಿರುವ ಸ್ಪೋರ್ಟ್ಸ್‌ ಅಥಾರಿಟಿ ಆಫ್ ಇಂಡಿಯಾ (SAI) ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವೈಯಕ್ತಿಕವಾಗಿ ನಾಲ್ಕು ಪದಕವನ್ನ ಪಡೆದಿದ್ದಾರೆ.

ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ 10 ವರ್ಷದ ಬಾಲಕ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

10 ಮೀಟರ್ ಏರ್ ರೈಫಲ್ ನಲ್ಲಿ 400 ಪಾಯಿಂಟ್ಸ್ ಗಳಲ್ಲಿ 363 ಪಾಯಿಂಟ್ಸ್ ಗಳಿಸುವ ಮೂಲಕ 4 ಪದಕಗಳನ್ನ ಪಡೆದಿದ್ದಾರೆ. ವೈಯಕ್ತಿಕವಾಗಿ ಚಿನ್ನ, ಯುವಕರ ವಿಭಾಗದಲ್ಲಿ ಚಿನ್ನ, ಯುವಕರ ತಂಡದಲ್ಲಿ ಚಿನ್ನ ಹಾಗೂ ಉಪ ಯುವಕರ ತಂಡದಲ್ಲಿ ಬೆಳ್ಳಿ ಪದಕವನ್ನ ಪಡೆದಿದ್ದಾರೆ. ಈ ಸಾಧನೆಯ ಮೂಲಕ ಉಮಾ ಕಾರ್ತಿಕ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹಾಕ್-ಐ ರೈಫಲ್ ಅಂಡ್ ಶೂಟಿಂಗ್ ಅಕಾಡೆಮಿಯಲ್ಲಿ ಶೂಟಿಂಗ್ ತರಬೇತಿಯನ್ನ ಪಡೆಯುತ್ತಿದ್ದು, ತರಬೇತಿದಾರರಾದ ಶರಣೇಂದ್ರ ಕೆ.ವೈ ರವರ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಾಗಿ ತಯಾರಿ ನಡೆಸಿದ್ದಾರೆ.

ಉಮಾ ಕಾರ್ತಿಕ್ 2028ರಲ್ಲಿ ಲಾಸ್ ಎಂಜಲೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಶೂಟಿಂಗ್ ವಿಭಾಗದಲ್ಲಿ ಭಾರತ ದೇಶದ ಪರವಾಗಿ ಸ್ಪರ್ಧಿಸುವ ಕನಸು ಕಂಡಿದ್ದಾರೆ.

ಈಗಾಗಲೇ ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದಿರುವ ಇವರು, ಮಾರ್ಕ್ ಮ್ಯಾನ್ ಶಿಪ್ ಸ್ಪೋರ್ಟ್ಸ್ ಶೂಟಿಂಗ್ ಚಾಂಪಿಯನ್ ಶಿಪ್ 2024 ನಲ್ಲಿ ಪ್ರತಿಷ್ಠಿತ ಎರಡು ಬೆಳ್ಳಿ ಪದಕ, ಮಿನಿ ಒಲಿಪಿಂಕ್ಸ್ 2024 ರಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಕರ್ನಾಟಕ ಅತ್ಯಂತ ಕಿರಿಯ ಶೂಟರ್ ಖ್ಯಾತಿಯನ್ನ ಗಳಿಸಿದ್ದಾರೆ.

Ramesh Babu

Journalist

Recent Posts

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

2 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

14 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

14 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

15 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

15 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

15 hours ago