Categories: ಕ್ರೀಡೆ

ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದ ಉಮಾ ಕಾರ್ತಿಕ್ ಪಾಟಿಬಂಡ್ಲ

ಬೆಂಗಳೂರು : ಜ್ಞಾನಭಾರತಿ ಅವರಣದಲ್ಲಿರುವ ಸ್ಪೋರ್ಟ್ಸ್‌ ಅಥಾರಿಟಿ ಆಫ್ ಇಂಡಿಯಾ (SAI) ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವೈಯಕ್ತಿಕವಾಗಿ ನಾಲ್ಕು ಪದಕವನ್ನ ಪಡೆದಿದ್ದಾರೆ.

ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ 10 ವರ್ಷದ ಬಾಲಕ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

10 ಮೀಟರ್ ಏರ್ ರೈಫಲ್ ನಲ್ಲಿ 400 ಪಾಯಿಂಟ್ಸ್ ಗಳಲ್ಲಿ 363 ಪಾಯಿಂಟ್ಸ್ ಗಳಿಸುವ ಮೂಲಕ 4 ಪದಕಗಳನ್ನ ಪಡೆದಿದ್ದಾರೆ. ವೈಯಕ್ತಿಕವಾಗಿ ಚಿನ್ನ, ಯುವಕರ ವಿಭಾಗದಲ್ಲಿ ಚಿನ್ನ, ಯುವಕರ ತಂಡದಲ್ಲಿ ಚಿನ್ನ ಹಾಗೂ ಉಪ ಯುವಕರ ತಂಡದಲ್ಲಿ ಬೆಳ್ಳಿ ಪದಕವನ್ನ ಪಡೆದಿದ್ದಾರೆ. ಈ ಸಾಧನೆಯ ಮೂಲಕ ಉಮಾ ಕಾರ್ತಿಕ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹಾಕ್-ಐ ರೈಫಲ್ ಅಂಡ್ ಶೂಟಿಂಗ್ ಅಕಾಡೆಮಿಯಲ್ಲಿ ಶೂಟಿಂಗ್ ತರಬೇತಿಯನ್ನ ಪಡೆಯುತ್ತಿದ್ದು, ತರಬೇತಿದಾರರಾದ ಶರಣೇಂದ್ರ ಕೆ.ವೈ ರವರ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಾಗಿ ತಯಾರಿ ನಡೆಸಿದ್ದಾರೆ.

ಉಮಾ ಕಾರ್ತಿಕ್ 2028ರಲ್ಲಿ ಲಾಸ್ ಎಂಜಲೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಶೂಟಿಂಗ್ ವಿಭಾಗದಲ್ಲಿ ಭಾರತ ದೇಶದ ಪರವಾಗಿ ಸ್ಪರ್ಧಿಸುವ ಕನಸು ಕಂಡಿದ್ದಾರೆ.

ಈಗಾಗಲೇ ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದಿರುವ ಇವರು, ಮಾರ್ಕ್ ಮ್ಯಾನ್ ಶಿಪ್ ಸ್ಪೋರ್ಟ್ಸ್ ಶೂಟಿಂಗ್ ಚಾಂಪಿಯನ್ ಶಿಪ್ 2024 ನಲ್ಲಿ ಪ್ರತಿಷ್ಠಿತ ಎರಡು ಬೆಳ್ಳಿ ಪದಕ, ಮಿನಿ ಒಲಿಪಿಂಕ್ಸ್ 2024 ರಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಕರ್ನಾಟಕ ಅತ್ಯಂತ ಕಿರಿಯ ಶೂಟರ್ ಖ್ಯಾತಿಯನ್ನ ಗಳಿಸಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

21 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago