Categories: ಕ್ರೀಡೆ

ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದ ಉಮಾ ಕಾರ್ತಿಕ್ ಪಾಟಿಬಂಡ್ಲ

ಬೆಂಗಳೂರು : ಜ್ಞಾನಭಾರತಿ ಅವರಣದಲ್ಲಿರುವ ಸ್ಪೋರ್ಟ್ಸ್‌ ಅಥಾರಿಟಿ ಆಫ್ ಇಂಡಿಯಾ (SAI) ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮಾಡುವ ಮೂಲಕ ವೈಯಕ್ತಿಕವಾಗಿ ನಾಲ್ಕು ಪದಕವನ್ನ ಪಡೆದಿದ್ದಾರೆ.

ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ಸಹಯೋಗದಲ್ಲಿ ನಡೆದ ಕರ್ನಾಟಕ ಸ್ಟೇಟ್ ಶೂಟಿಂಗ್ ಚಾಂಪಿಯನ್ ಶಿಪ್ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ 10 ವರ್ಷದ ಬಾಲಕ ಉಮಾ ಕಾರ್ತಿಕ್ ಪಾಟಿಬಂಡ್ಲ ಅತ್ಯುತ್ತಮ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

10 ಮೀಟರ್ ಏರ್ ರೈಫಲ್ ನಲ್ಲಿ 400 ಪಾಯಿಂಟ್ಸ್ ಗಳಲ್ಲಿ 363 ಪಾಯಿಂಟ್ಸ್ ಗಳಿಸುವ ಮೂಲಕ 4 ಪದಕಗಳನ್ನ ಪಡೆದಿದ್ದಾರೆ. ವೈಯಕ್ತಿಕವಾಗಿ ಚಿನ್ನ, ಯುವಕರ ವಿಭಾಗದಲ್ಲಿ ಚಿನ್ನ, ಯುವಕರ ತಂಡದಲ್ಲಿ ಚಿನ್ನ ಹಾಗೂ ಉಪ ಯುವಕರ ತಂಡದಲ್ಲಿ ಬೆಳ್ಳಿ ಪದಕವನ್ನ ಪಡೆದಿದ್ದಾರೆ. ಈ ಸಾಧನೆಯ ಮೂಲಕ ಉಮಾ ಕಾರ್ತಿಕ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹಾಕ್-ಐ ರೈಫಲ್ ಅಂಡ್ ಶೂಟಿಂಗ್ ಅಕಾಡೆಮಿಯಲ್ಲಿ ಶೂಟಿಂಗ್ ತರಬೇತಿಯನ್ನ ಪಡೆಯುತ್ತಿದ್ದು, ತರಬೇತಿದಾರರಾದ ಶರಣೇಂದ್ರ ಕೆ.ವೈ ರವರ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಾಗಿ ತಯಾರಿ ನಡೆಸಿದ್ದಾರೆ.

ಉಮಾ ಕಾರ್ತಿಕ್ 2028ರಲ್ಲಿ ಲಾಸ್ ಎಂಜಲೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಶೂಟಿಂಗ್ ವಿಭಾಗದಲ್ಲಿ ಭಾರತ ದೇಶದ ಪರವಾಗಿ ಸ್ಪರ್ಧಿಸುವ ಕನಸು ಕಂಡಿದ್ದಾರೆ.

ಈಗಾಗಲೇ ಕರ್ನಾಟಕದ ಅತ್ಯಂತ ಕಿರಿಯ ಶೂಟರ್ ಎಂಬ ಖ್ಯಾತಿ ಪಡೆದಿರುವ ಇವರು, ಮಾರ್ಕ್ ಮ್ಯಾನ್ ಶಿಪ್ ಸ್ಪೋರ್ಟ್ಸ್ ಶೂಟಿಂಗ್ ಚಾಂಪಿಯನ್ ಶಿಪ್ 2024 ನಲ್ಲಿ ಪ್ರತಿಷ್ಠಿತ ಎರಡು ಬೆಳ್ಳಿ ಪದಕ, ಮಿನಿ ಒಲಿಪಿಂಕ್ಸ್ 2024 ರಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಕರ್ನಾಟಕ ಅತ್ಯಂತ ಕಿರಿಯ ಶೂಟರ್ ಖ್ಯಾತಿಯನ್ನ ಗಳಿಸಿದ್ದಾರೆ.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

16 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

21 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago