Categories: ಪರಿಸರ

ಕರ್ನಾಟಕದ ಈ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ

ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ‘ಎ’ ದರ್ಜೆ ಗುಣಮಟ್ಟ ಕಳೆದುಕೊಂಡಿವೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲಜನಕ ಕೊರತೆ ಹಾಗೂ ಬ್ಯಾಕ್ಟೀರಿಯಾಗಳು ನೀರಿನ ಗುಣಮಟ್ಟ ಕುಸಿತಕ್ಕೆ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಜೀವಜಲವಾಗಿರುವ ನದಿಗಳ ಸ್ಥಿತಿಗತಿ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB ) ಆತಂಕಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯ ಪ್ರಕಾರ, ರಾಜ್ಯದ 12 ಪ್ರಮುಖ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್‌ನಲ್ಲಿ ನಡೆಸಿದ ಪರೀಕ್ಷೆಯಲ್ಲಿ, ಕಾವೇರಿ, ಕೃಷ್ಣ, ಭೀಮಾ, ತುಂಗಭದ್ರ ಸೇರಿದಂತೆ ಯಾವುದೇ ನದಿಯು ಎ ದರ್ಜೆಯ ಗುಣಮಟ್ಟವನ್ನು ಹೊಂದಿಲ್ಲ ಎಂದು ಹೇಳಲಾಗಿದೆ.

ನದಿಯ ನೀರಿನ ಗುಣಮಟ್ಟವನ್ನು ಪ್ರತಿ ತಿಂಗಳು ಪರಿಶೀಲಿಸಲಾಗುತ್ತದೆ. ಈ ಇತ್ತೀಚಿನ ವರದಿಯು ನದಿಗಳ ಮಾಲಿನ್ಯದ ಭೀಕರತೆ ಇರುವ ಬಗ್ಗೆ ತಿಳಿಸಿದೆ. ಎ ದರ್ಜೆಯು ನೇರವಾಗಿ ಕುಡಿಯಲು ಯೋಗ್ಯವಾದ ನೀರನ್ನು ಸೂಚಿಸಿದರೆ, ಬಿ ದರ್ಜೆಯು ಸಂಸ್ಕರಿಸಿದ ನಂತರ ಗೃಹಬಳಕೆಗೆ ಯೋಗ್ಯವಾದ ನೀರನ್ನು, ಸಿ ದರ್ಜೆಯು ಮೀನುಗಾರಿಕೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸೂಕ್ತವಾದ ನೀರನ್ನು ಸೂಚಿಸುತ್ತದೆ. ಡಿ ಮತ್ತು ಝಡ್ ದರ್ಜೆಗಳು ಅತ್ಯಂತ ಕಲುಷಿತ ನೀರು ಎಂದು ತಿಳಿಸುತ್ತದೆ.

ಒಟ್ಟು 12 ನದಿಗಳ ನೀರಿನ ಪರೀಕ್ಷೆಯ ವೇಳೆ ನೇತ್ರಾವತಿ ನದಿ ಮಾತ್ರ ಬಿ ದರ್ಜೆಯ ಗುಣಮಟ್ಟವನ್ನು ಹೊಂದಿದ್ದು, ಇದು ನೇರವಾಗಿ ಕುಡಿಯಲು ಸಾಧ್ಯವಿಲ್ಲವಾದರೂ ಸ್ನಾನ ಅಥವಾ ಗೃಹಬಳಕೆಗೆ ಸಂಸ್ಕರಿಸಿದ ನಂತರ ಬಳಸಬಹುದು.

ಇನ್ನು ಕಾವೇರಿ, ಲಕ್ಷ್ಮಣ ತೀರ್ಥ, ತುಂಗಭದ್ರ, ಭದ್ರ, ಕೃಷ್ಣ, ಶಿಂಷಾ ಮತ್ತು ಕಬಿನಿ ಸೇರಿದಂತೆ ಎಂಟು ನದಿಗಳು ಸಿ ದರ್ಜೆಯ ಗುಣಮಟ್ಟವನ್ನು ಹೊಂದಿವೆ. ಈ ನದಿಗಳ ನೀರನ್ನು ಗೃಹ ಬಳಕೆಗೆ ಬಳಸಬೇಕಾದರೂ ಸಹ ಕಡ್ಡಾಯವಾಗಿ ಸಂಸ್ಕರಿಸಬೇಕು. ವಿಶೇಷವಾಗಿ, ಕಾವೇರಿ ನದಿಯು ಸಿ ದರ್ಜೆಯಲ್ಲಿರುವುದು ಕಳವಳಕಾರಿಯಾಗಿದೆ, ಏಕೆಂದರೆ ಇದು ರಾಜ್ಯದ ಪ್ರಮುಖ ಜೀವನಾಡಿಯಾಗಿದೆ.

ಭೀಮಾ, ಕಾಗಿಣಾ ಮತ್ತು ಅರ್ಕಾವತಿ ನದಿಗಳು ಡಿ ದರ್ಜೆಗೆ ಸೇರಿದೆ. ಬೆಂಗಳೂರಿನ ವೃಷಭಾವತಿ ನದಿಯನ್ನು ಝೆಡ್ ದರ್ಜೆಗೆ ಸೇರಿಸುವಷ್ಟು ಮಾಲಿನ್ಯಗೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾಲಿನ್ಯಕ್ಕೆ ಪ್ರಮುಖ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಕೈಗಾರಿಕಾ ರಾಸಾಯನಿಕಗಳು, ನೀರಿನಲ್ಲಿ ಆಮ್ಲಜನಕದ ಕೊರತೆ ಮತ್ತು ಬಯೋಕೆಮಿಕಲ್ ಆಕ್ಸಿಜನ್ ಡಿಮಾಂಡ್ (BOD) ಮಟ್ಟದಲ್ಲಿನ ಕುಸಿತವಾಗಿದೆ. ಸಾಮಾನ್ಯವಾಗಿ, ಪ್ರತಿ ಲೀಟರ್ ನೀರಿಗೆ 6 ರಿಂದ 8 ಮಿಲಿಗ್ರಾಂ ಆಮ್ಲಜನಕ ಇರಬೇಕು. ಆದರೆ ಬಹುತೇಕ ನದಿಗಳಲ್ಲಿ ಈ ಮಟ್ಟ ಇಲ್ಲ. ಕೋಲಿಫಾರ್ಮ್ ಮತ್ತು ಫೇಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಇರುವಿಕೆಯೂ ನೀರಿನ ಗುಣಮಟ್ಟವನ್ನು ಹಾಳುಮಾಡಿದೆ.

ವರದಿಯು ಕರ್ನಾಟಕದ ನದಿಗಳ ಪರಿಸ್ಥಿತಿಯ ಕುರಿತು ರೆಡ್ ಅಲರ್ಟ್ ನೀಡಿದಂತಿದೆ. ನದಿಗಳನ್ನು ನಂಬಿಕೊಂಡು ಜೀವಿಸುವ ಲಕ್ಷಾಂತರ ಜನರ ಆರೋಗ್ಯ ಮತ್ತು ಮುಂದಿನ ಪೀಳಿಗೆಯ ಭವಿಷ್ಯದ ಬಗ್ಗೆ ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನದಿಗಳ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣದ ಹಾಗೂ ಕಠಿಣ ಕ್ರಮಗಳು ಅಗತ್ಯವಾಗಿವೆ.

Ramesh Babu

Journalist

Share
Published by
Ramesh Babu

Recent Posts

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

3 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

4 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

15 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

23 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago