Categories: ಪರಿಸರ

ಕರ್ನಾಟಕದ ಈ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ

ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ‘ಎ’ ದರ್ಜೆ ಗುಣಮಟ್ಟ ಕಳೆದುಕೊಂಡಿವೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲಜನಕ ಕೊರತೆ ಹಾಗೂ ಬ್ಯಾಕ್ಟೀರಿಯಾಗಳು ನೀರಿನ ಗುಣಮಟ್ಟ ಕುಸಿತಕ್ಕೆ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಜೀವಜಲವಾಗಿರುವ ನದಿಗಳ ಸ್ಥಿತಿಗತಿ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB ) ಆತಂಕಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯ ಪ್ರಕಾರ, ರಾಜ್ಯದ 12 ಪ್ರಮುಖ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್‌ನಲ್ಲಿ ನಡೆಸಿದ ಪರೀಕ್ಷೆಯಲ್ಲಿ, ಕಾವೇರಿ, ಕೃಷ್ಣ, ಭೀಮಾ, ತುಂಗಭದ್ರ ಸೇರಿದಂತೆ ಯಾವುದೇ ನದಿಯು ಎ ದರ್ಜೆಯ ಗುಣಮಟ್ಟವನ್ನು ಹೊಂದಿಲ್ಲ ಎಂದು ಹೇಳಲಾಗಿದೆ.

ನದಿಯ ನೀರಿನ ಗುಣಮಟ್ಟವನ್ನು ಪ್ರತಿ ತಿಂಗಳು ಪರಿಶೀಲಿಸಲಾಗುತ್ತದೆ. ಈ ಇತ್ತೀಚಿನ ವರದಿಯು ನದಿಗಳ ಮಾಲಿನ್ಯದ ಭೀಕರತೆ ಇರುವ ಬಗ್ಗೆ ತಿಳಿಸಿದೆ. ಎ ದರ್ಜೆಯು ನೇರವಾಗಿ ಕುಡಿಯಲು ಯೋಗ್ಯವಾದ ನೀರನ್ನು ಸೂಚಿಸಿದರೆ, ಬಿ ದರ್ಜೆಯು ಸಂಸ್ಕರಿಸಿದ ನಂತರ ಗೃಹಬಳಕೆಗೆ ಯೋಗ್ಯವಾದ ನೀರನ್ನು, ಸಿ ದರ್ಜೆಯು ಮೀನುಗಾರಿಕೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸೂಕ್ತವಾದ ನೀರನ್ನು ಸೂಚಿಸುತ್ತದೆ. ಡಿ ಮತ್ತು ಝಡ್ ದರ್ಜೆಗಳು ಅತ್ಯಂತ ಕಲುಷಿತ ನೀರು ಎಂದು ತಿಳಿಸುತ್ತದೆ.

ಒಟ್ಟು 12 ನದಿಗಳ ನೀರಿನ ಪರೀಕ್ಷೆಯ ವೇಳೆ ನೇತ್ರಾವತಿ ನದಿ ಮಾತ್ರ ಬಿ ದರ್ಜೆಯ ಗುಣಮಟ್ಟವನ್ನು ಹೊಂದಿದ್ದು, ಇದು ನೇರವಾಗಿ ಕುಡಿಯಲು ಸಾಧ್ಯವಿಲ್ಲವಾದರೂ ಸ್ನಾನ ಅಥವಾ ಗೃಹಬಳಕೆಗೆ ಸಂಸ್ಕರಿಸಿದ ನಂತರ ಬಳಸಬಹುದು.

ಇನ್ನು ಕಾವೇರಿ, ಲಕ್ಷ್ಮಣ ತೀರ್ಥ, ತುಂಗಭದ್ರ, ಭದ್ರ, ಕೃಷ್ಣ, ಶಿಂಷಾ ಮತ್ತು ಕಬಿನಿ ಸೇರಿದಂತೆ ಎಂಟು ನದಿಗಳು ಸಿ ದರ್ಜೆಯ ಗುಣಮಟ್ಟವನ್ನು ಹೊಂದಿವೆ. ಈ ನದಿಗಳ ನೀರನ್ನು ಗೃಹ ಬಳಕೆಗೆ ಬಳಸಬೇಕಾದರೂ ಸಹ ಕಡ್ಡಾಯವಾಗಿ ಸಂಸ್ಕರಿಸಬೇಕು. ವಿಶೇಷವಾಗಿ, ಕಾವೇರಿ ನದಿಯು ಸಿ ದರ್ಜೆಯಲ್ಲಿರುವುದು ಕಳವಳಕಾರಿಯಾಗಿದೆ, ಏಕೆಂದರೆ ಇದು ರಾಜ್ಯದ ಪ್ರಮುಖ ಜೀವನಾಡಿಯಾಗಿದೆ.

ಭೀಮಾ, ಕಾಗಿಣಾ ಮತ್ತು ಅರ್ಕಾವತಿ ನದಿಗಳು ಡಿ ದರ್ಜೆಗೆ ಸೇರಿದೆ. ಬೆಂಗಳೂರಿನ ವೃಷಭಾವತಿ ನದಿಯನ್ನು ಝೆಡ್ ದರ್ಜೆಗೆ ಸೇರಿಸುವಷ್ಟು ಮಾಲಿನ್ಯಗೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾಲಿನ್ಯಕ್ಕೆ ಪ್ರಮುಖ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಕೈಗಾರಿಕಾ ರಾಸಾಯನಿಕಗಳು, ನೀರಿನಲ್ಲಿ ಆಮ್ಲಜನಕದ ಕೊರತೆ ಮತ್ತು ಬಯೋಕೆಮಿಕಲ್ ಆಕ್ಸಿಜನ್ ಡಿಮಾಂಡ್ (BOD) ಮಟ್ಟದಲ್ಲಿನ ಕುಸಿತವಾಗಿದೆ. ಸಾಮಾನ್ಯವಾಗಿ, ಪ್ರತಿ ಲೀಟರ್ ನೀರಿಗೆ 6 ರಿಂದ 8 ಮಿಲಿಗ್ರಾಂ ಆಮ್ಲಜನಕ ಇರಬೇಕು. ಆದರೆ ಬಹುತೇಕ ನದಿಗಳಲ್ಲಿ ಈ ಮಟ್ಟ ಇಲ್ಲ. ಕೋಲಿಫಾರ್ಮ್ ಮತ್ತು ಫೇಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಇರುವಿಕೆಯೂ ನೀರಿನ ಗುಣಮಟ್ಟವನ್ನು ಹಾಳುಮಾಡಿದೆ.

ವರದಿಯು ಕರ್ನಾಟಕದ ನದಿಗಳ ಪರಿಸ್ಥಿತಿಯ ಕುರಿತು ರೆಡ್ ಅಲರ್ಟ್ ನೀಡಿದಂತಿದೆ. ನದಿಗಳನ್ನು ನಂಬಿಕೊಂಡು ಜೀವಿಸುವ ಲಕ್ಷಾಂತರ ಜನರ ಆರೋಗ್ಯ ಮತ್ತು ಮುಂದಿನ ಪೀಳಿಗೆಯ ಭವಿಷ್ಯದ ಬಗ್ಗೆ ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನದಿಗಳ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣದ ಹಾಗೂ ಕಠಿಣ ಕ್ರಮಗಳು ಅಗತ್ಯವಾಗಿವೆ.

Ramesh Babu

Journalist

Share
Published by
Ramesh Babu

Recent Posts

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

4 minutes ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

33 minutes ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

3 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

6 hours ago

‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…

6 hours ago