Categories: ಪರಿಸರ

ಕರ್ನಾಟಕದ ಈ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ

ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ‘ಎ’ ದರ್ಜೆ ಗುಣಮಟ್ಟ ಕಳೆದುಕೊಂಡಿವೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲಜನಕ ಕೊರತೆ ಹಾಗೂ ಬ್ಯಾಕ್ಟೀರಿಯಾಗಳು ನೀರಿನ ಗುಣಮಟ್ಟ ಕುಸಿತಕ್ಕೆ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಜೀವಜಲವಾಗಿರುವ ನದಿಗಳ ಸ್ಥಿತಿಗತಿ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB ) ಆತಂಕಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯ ಪ್ರಕಾರ, ರಾಜ್ಯದ 12 ಪ್ರಮುಖ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್‌ನಲ್ಲಿ ನಡೆಸಿದ ಪರೀಕ್ಷೆಯಲ್ಲಿ, ಕಾವೇರಿ, ಕೃಷ್ಣ, ಭೀಮಾ, ತುಂಗಭದ್ರ ಸೇರಿದಂತೆ ಯಾವುದೇ ನದಿಯು ಎ ದರ್ಜೆಯ ಗುಣಮಟ್ಟವನ್ನು ಹೊಂದಿಲ್ಲ ಎಂದು ಹೇಳಲಾಗಿದೆ.

ನದಿಯ ನೀರಿನ ಗುಣಮಟ್ಟವನ್ನು ಪ್ರತಿ ತಿಂಗಳು ಪರಿಶೀಲಿಸಲಾಗುತ್ತದೆ. ಈ ಇತ್ತೀಚಿನ ವರದಿಯು ನದಿಗಳ ಮಾಲಿನ್ಯದ ಭೀಕರತೆ ಇರುವ ಬಗ್ಗೆ ತಿಳಿಸಿದೆ. ಎ ದರ್ಜೆಯು ನೇರವಾಗಿ ಕುಡಿಯಲು ಯೋಗ್ಯವಾದ ನೀರನ್ನು ಸೂಚಿಸಿದರೆ, ಬಿ ದರ್ಜೆಯು ಸಂಸ್ಕರಿಸಿದ ನಂತರ ಗೃಹಬಳಕೆಗೆ ಯೋಗ್ಯವಾದ ನೀರನ್ನು, ಸಿ ದರ್ಜೆಯು ಮೀನುಗಾರಿಕೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸೂಕ್ತವಾದ ನೀರನ್ನು ಸೂಚಿಸುತ್ತದೆ. ಡಿ ಮತ್ತು ಝಡ್ ದರ್ಜೆಗಳು ಅತ್ಯಂತ ಕಲುಷಿತ ನೀರು ಎಂದು ತಿಳಿಸುತ್ತದೆ.

ಒಟ್ಟು 12 ನದಿಗಳ ನೀರಿನ ಪರೀಕ್ಷೆಯ ವೇಳೆ ನೇತ್ರಾವತಿ ನದಿ ಮಾತ್ರ ಬಿ ದರ್ಜೆಯ ಗುಣಮಟ್ಟವನ್ನು ಹೊಂದಿದ್ದು, ಇದು ನೇರವಾಗಿ ಕುಡಿಯಲು ಸಾಧ್ಯವಿಲ್ಲವಾದರೂ ಸ್ನಾನ ಅಥವಾ ಗೃಹಬಳಕೆಗೆ ಸಂಸ್ಕರಿಸಿದ ನಂತರ ಬಳಸಬಹುದು.

ಇನ್ನು ಕಾವೇರಿ, ಲಕ್ಷ್ಮಣ ತೀರ್ಥ, ತುಂಗಭದ್ರ, ಭದ್ರ, ಕೃಷ್ಣ, ಶಿಂಷಾ ಮತ್ತು ಕಬಿನಿ ಸೇರಿದಂತೆ ಎಂಟು ನದಿಗಳು ಸಿ ದರ್ಜೆಯ ಗುಣಮಟ್ಟವನ್ನು ಹೊಂದಿವೆ. ಈ ನದಿಗಳ ನೀರನ್ನು ಗೃಹ ಬಳಕೆಗೆ ಬಳಸಬೇಕಾದರೂ ಸಹ ಕಡ್ಡಾಯವಾಗಿ ಸಂಸ್ಕರಿಸಬೇಕು. ವಿಶೇಷವಾಗಿ, ಕಾವೇರಿ ನದಿಯು ಸಿ ದರ್ಜೆಯಲ್ಲಿರುವುದು ಕಳವಳಕಾರಿಯಾಗಿದೆ, ಏಕೆಂದರೆ ಇದು ರಾಜ್ಯದ ಪ್ರಮುಖ ಜೀವನಾಡಿಯಾಗಿದೆ.

ಭೀಮಾ, ಕಾಗಿಣಾ ಮತ್ತು ಅರ್ಕಾವತಿ ನದಿಗಳು ಡಿ ದರ್ಜೆಗೆ ಸೇರಿದೆ. ಬೆಂಗಳೂರಿನ ವೃಷಭಾವತಿ ನದಿಯನ್ನು ಝೆಡ್ ದರ್ಜೆಗೆ ಸೇರಿಸುವಷ್ಟು ಮಾಲಿನ್ಯಗೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾಲಿನ್ಯಕ್ಕೆ ಪ್ರಮುಖ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಕೈಗಾರಿಕಾ ರಾಸಾಯನಿಕಗಳು, ನೀರಿನಲ್ಲಿ ಆಮ್ಲಜನಕದ ಕೊರತೆ ಮತ್ತು ಬಯೋಕೆಮಿಕಲ್ ಆಕ್ಸಿಜನ್ ಡಿಮಾಂಡ್ (BOD) ಮಟ್ಟದಲ್ಲಿನ ಕುಸಿತವಾಗಿದೆ. ಸಾಮಾನ್ಯವಾಗಿ, ಪ್ರತಿ ಲೀಟರ್ ನೀರಿಗೆ 6 ರಿಂದ 8 ಮಿಲಿಗ್ರಾಂ ಆಮ್ಲಜನಕ ಇರಬೇಕು. ಆದರೆ ಬಹುತೇಕ ನದಿಗಳಲ್ಲಿ ಈ ಮಟ್ಟ ಇಲ್ಲ. ಕೋಲಿಫಾರ್ಮ್ ಮತ್ತು ಫೇಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಇರುವಿಕೆಯೂ ನೀರಿನ ಗುಣಮಟ್ಟವನ್ನು ಹಾಳುಮಾಡಿದೆ.

ವರದಿಯು ಕರ್ನಾಟಕದ ನದಿಗಳ ಪರಿಸ್ಥಿತಿಯ ಕುರಿತು ರೆಡ್ ಅಲರ್ಟ್ ನೀಡಿದಂತಿದೆ. ನದಿಗಳನ್ನು ನಂಬಿಕೊಂಡು ಜೀವಿಸುವ ಲಕ್ಷಾಂತರ ಜನರ ಆರೋಗ್ಯ ಮತ್ತು ಮುಂದಿನ ಪೀಳಿಗೆಯ ಭವಿಷ್ಯದ ಬಗ್ಗೆ ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನದಿಗಳ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣದ ಹಾಗೂ ಕಠಿಣ ಕ್ರಮಗಳು ಅಗತ್ಯವಾಗಿವೆ.

Ramesh Babu

Journalist

Share
Published by
Ramesh Babu

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

7 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

8 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

8 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

11 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

14 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

14 hours ago