Categories: ಪರಿಸರ

ಕರ್ನಾಟಕದ ಈ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ

ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ‘ಎ’ ದರ್ಜೆ ಗುಣಮಟ್ಟ ಕಳೆದುಕೊಂಡಿವೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲಜನಕ ಕೊರತೆ ಹಾಗೂ ಬ್ಯಾಕ್ಟೀರಿಯಾಗಳು ನೀರಿನ ಗುಣಮಟ್ಟ ಕುಸಿತಕ್ಕೆ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಜೀವಜಲವಾಗಿರುವ ನದಿಗಳ ಸ್ಥಿತಿಗತಿ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB ) ಆತಂಕಕಾರಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯ ಪ್ರಕಾರ, ರಾಜ್ಯದ 12 ಪ್ರಮುಖ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್‌ನಲ್ಲಿ ನಡೆಸಿದ ಪರೀಕ್ಷೆಯಲ್ಲಿ, ಕಾವೇರಿ, ಕೃಷ್ಣ, ಭೀಮಾ, ತುಂಗಭದ್ರ ಸೇರಿದಂತೆ ಯಾವುದೇ ನದಿಯು ಎ ದರ್ಜೆಯ ಗುಣಮಟ್ಟವನ್ನು ಹೊಂದಿಲ್ಲ ಎಂದು ಹೇಳಲಾಗಿದೆ.

ನದಿಯ ನೀರಿನ ಗುಣಮಟ್ಟವನ್ನು ಪ್ರತಿ ತಿಂಗಳು ಪರಿಶೀಲಿಸಲಾಗುತ್ತದೆ. ಈ ಇತ್ತೀಚಿನ ವರದಿಯು ನದಿಗಳ ಮಾಲಿನ್ಯದ ಭೀಕರತೆ ಇರುವ ಬಗ್ಗೆ ತಿಳಿಸಿದೆ. ಎ ದರ್ಜೆಯು ನೇರವಾಗಿ ಕುಡಿಯಲು ಯೋಗ್ಯವಾದ ನೀರನ್ನು ಸೂಚಿಸಿದರೆ, ಬಿ ದರ್ಜೆಯು ಸಂಸ್ಕರಿಸಿದ ನಂತರ ಗೃಹಬಳಕೆಗೆ ಯೋಗ್ಯವಾದ ನೀರನ್ನು, ಸಿ ದರ್ಜೆಯು ಮೀನುಗಾರಿಕೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸೂಕ್ತವಾದ ನೀರನ್ನು ಸೂಚಿಸುತ್ತದೆ. ಡಿ ಮತ್ತು ಝಡ್ ದರ್ಜೆಗಳು ಅತ್ಯಂತ ಕಲುಷಿತ ನೀರು ಎಂದು ತಿಳಿಸುತ್ತದೆ.

ಒಟ್ಟು 12 ನದಿಗಳ ನೀರಿನ ಪರೀಕ್ಷೆಯ ವೇಳೆ ನೇತ್ರಾವತಿ ನದಿ ಮಾತ್ರ ಬಿ ದರ್ಜೆಯ ಗುಣಮಟ್ಟವನ್ನು ಹೊಂದಿದ್ದು, ಇದು ನೇರವಾಗಿ ಕುಡಿಯಲು ಸಾಧ್ಯವಿಲ್ಲವಾದರೂ ಸ್ನಾನ ಅಥವಾ ಗೃಹಬಳಕೆಗೆ ಸಂಸ್ಕರಿಸಿದ ನಂತರ ಬಳಸಬಹುದು.

ಇನ್ನು ಕಾವೇರಿ, ಲಕ್ಷ್ಮಣ ತೀರ್ಥ, ತುಂಗಭದ್ರ, ಭದ್ರ, ಕೃಷ್ಣ, ಶಿಂಷಾ ಮತ್ತು ಕಬಿನಿ ಸೇರಿದಂತೆ ಎಂಟು ನದಿಗಳು ಸಿ ದರ್ಜೆಯ ಗುಣಮಟ್ಟವನ್ನು ಹೊಂದಿವೆ. ಈ ನದಿಗಳ ನೀರನ್ನು ಗೃಹ ಬಳಕೆಗೆ ಬಳಸಬೇಕಾದರೂ ಸಹ ಕಡ್ಡಾಯವಾಗಿ ಸಂಸ್ಕರಿಸಬೇಕು. ವಿಶೇಷವಾಗಿ, ಕಾವೇರಿ ನದಿಯು ಸಿ ದರ್ಜೆಯಲ್ಲಿರುವುದು ಕಳವಳಕಾರಿಯಾಗಿದೆ, ಏಕೆಂದರೆ ಇದು ರಾಜ್ಯದ ಪ್ರಮುಖ ಜೀವನಾಡಿಯಾಗಿದೆ.

ಭೀಮಾ, ಕಾಗಿಣಾ ಮತ್ತು ಅರ್ಕಾವತಿ ನದಿಗಳು ಡಿ ದರ್ಜೆಗೆ ಸೇರಿದೆ. ಬೆಂಗಳೂರಿನ ವೃಷಭಾವತಿ ನದಿಯನ್ನು ಝೆಡ್ ದರ್ಜೆಗೆ ಸೇರಿಸುವಷ್ಟು ಮಾಲಿನ್ಯಗೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾಲಿನ್ಯಕ್ಕೆ ಪ್ರಮುಖ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಕೈಗಾರಿಕಾ ರಾಸಾಯನಿಕಗಳು, ನೀರಿನಲ್ಲಿ ಆಮ್ಲಜನಕದ ಕೊರತೆ ಮತ್ತು ಬಯೋಕೆಮಿಕಲ್ ಆಕ್ಸಿಜನ್ ಡಿಮಾಂಡ್ (BOD) ಮಟ್ಟದಲ್ಲಿನ ಕುಸಿತವಾಗಿದೆ. ಸಾಮಾನ್ಯವಾಗಿ, ಪ್ರತಿ ಲೀಟರ್ ನೀರಿಗೆ 6 ರಿಂದ 8 ಮಿಲಿಗ್ರಾಂ ಆಮ್ಲಜನಕ ಇರಬೇಕು. ಆದರೆ ಬಹುತೇಕ ನದಿಗಳಲ್ಲಿ ಈ ಮಟ್ಟ ಇಲ್ಲ. ಕೋಲಿಫಾರ್ಮ್ ಮತ್ತು ಫೇಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಇರುವಿಕೆಯೂ ನೀರಿನ ಗುಣಮಟ್ಟವನ್ನು ಹಾಳುಮಾಡಿದೆ.

ವರದಿಯು ಕರ್ನಾಟಕದ ನದಿಗಳ ಪರಿಸ್ಥಿತಿಯ ಕುರಿತು ರೆಡ್ ಅಲರ್ಟ್ ನೀಡಿದಂತಿದೆ. ನದಿಗಳನ್ನು ನಂಬಿಕೊಂಡು ಜೀವಿಸುವ ಲಕ್ಷಾಂತರ ಜನರ ಆರೋಗ್ಯ ಮತ್ತು ಮುಂದಿನ ಪೀಳಿಗೆಯ ಭವಿಷ್ಯದ ಬಗ್ಗೆ ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನದಿಗಳ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣದ ಹಾಗೂ ಕಠಿಣ ಕ್ರಮಗಳು ಅಗತ್ಯವಾಗಿವೆ.

Ramesh Babu

Journalist

Share
Published by
Ramesh Babu

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

16 seconds ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

37 minutes ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

16 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

1 day ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago