Categories: ಬಳ್ಳಾರಿ

ಕರ್ನಾಟಕದ ತೆಕ್ಕಲಕೋಟೆ ಪೊಲೀಸ್ ಠಾಣೆಯು ದೇಶದ ಅತ್ತುತ್ತಮ 10ನೇ ಪೊಲೀಸ್ ಠಾಣೆಯಾಗಿ ಆಯ್ಕೆ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣೆಯು ದೇಶದ ಅತ್ತುತ್ತಮ 10ನೇ ಪೊಲೀಸ್ ಠಾಣೆಯಾಗಿ ಆಯ್ಕೆಯಾಗಿದೆ.

ಕೇಂದ್ರ ಗೃಹ ಸಚಿವಾಲಯ ನೀಡುವ ವಾರ್ಷಿಕ ಪ್ರಶಸ್ತಿಗೆ ಈ ಠಾಣೆ ಪಾತ್ರವಾಗಿದೆ. ಈ ಬಗ್ಗೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ತೆಕ್ಕಲಕೋಟೆ ಠಾಣೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಾರ್ಯದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾರ್ವಜನಿಕ ವಲಯದಲ್ಲೂ ಸಹ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕೇಂದ್ರದಿಂದ ಪ್ರಶಸ್ತಿ ಪತ್ರ ಬರುವುದಷ್ಟೇ ಬಾಕಿ ಇದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಒಬ್ಬರು ಪಿಎಸ್‌ಐ, ಇಬ್ಬರು ಎಎಸ್‌ಐ, 6 ಹೆಡ್ ಕಾನ್‌ಸ್ಟೇಬಲ್, 10 ಜನ ಪೊಲೀಸ್ ಕಾನ್‌ಸ್ಟೇಬಲ್, ಮೂವರು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ದೇಶದಲ್ಲಿರುವ 17,535 ಪೊಲೀಸ್ ಠಾಣೆಗಳ ಪೈಕಿ 78 ಠಾಣೆಗಳನ್ನು ಟಾಪ್ 10ರ ಆಯ್ಕೆಗಾಗಿ ಅಂತಿಮಗೊಳಿಸಲಾಗಿತ್ತು. ಇದರಲ್ಲಿ ಕರ್ನಾಟಕದಿಂದ ತೆಕ್ಕಲಕೋಟೆ, ಹಚೊಳ್ಳಿ ಪೊಲೀಸ್ ಠಾಣೆ ಮತ್ತು ಬೆಂಗಳೂರಿನ ಯಲಹಂಕ ನ್ಯೂ ಟೌನ್ ಠಾಣೆಗಳು ಸ್ಥಾನ ಪಡೆದಿದ್ದವು. ಅಂತಿಮವಾಗಿ ತೆಕ್ಕಲಕೋಟೆ ಅಗ್ರ ಹತ್ತರ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.

 ಅತ್ಯುತ್ತಮ ಠಾಣೆಯ ಪಟ್ಟಿಯಲ್ಲಿ ಸ್ಥಾನ ಪಡೆಯಲು ಹಲವು ಮಾನದಂಡಗಳಿವೆ. ಠಾಣೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಪರಾಮರ್ಶೆಗೆ ಒಳಪಡಿಸಿ, ಕೇಂದ್ರ ಗೃಹ ಇಲಾಖೆ ಈ ಪ್ರಶಸ್ತಿ ನೀಡುತ್ತದೆ.

ಪ್ರಶಸ್ತಿಗೆ ಇರುವ ಮಾನದಂಡಗಳು : ಪೊಲೀಸ್ ಠಾಣೆಯ ಸಮಗ್ರ ಕಾರ್ಯನಿರ್ವಹಣೆಯನ್ನು ಇದಕ್ಕಾಗಿ ಪರಿಗಣಿಸಲಾಗುತ್ತದೆ. ಜನಸ್ನೇಹಿಯಾಗಿ ಠಾಣೆಯೊಂದು ಎಷ್ಟು ಸಮರ್ಪಕವಾಗಿ ಕೆಲಸ ಮಾಡುತ್ತಿದೆ ಎಂಬುದರ ಕುರಿತು ಪರಿಗಣನೆಯಾಗುತ್ತದೆ.

ಸಿಬ್ಬಂದಿ ವರ್ತನೆ, ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಇತ್ಯರ್ಥದ ಶೇಕಡಾವಾರು, ಇತ್ಯರ್ಥವಾದ ಪ್ರಕರಣಗಳ ಸಮರ್ಪಕತೆ, ಪೊಲೀಸ್ ಠಾಣೆ ವತಿಯಿಂದ ಮಾಡಿರುವ ದಾಳಿಗಳ ಪ್ರಮಾಣ, ಠಾಣೆಯ ಮೂಲ ಸೌಕರ್ಯ, ಸಾರ್ವಜನಿಕರೊಂದಿಗಿನ ಠಾಣಾ ಸಿಬ್ಬಂದಿ ವ್ಯವಹಾರ, ವಿಶೇಷವಾಗಿ ಅಶಕ್ತರು, ವಿಕಲಚೇತನರು, ಮಹಿಳೆಯರೊಂದಿಗೆ ಪೊಲೀಸ್ ಠಾಣೆ ಎಷ್ಟು ಸ್ನೇಹಪೂರ್ವಕವಾಗಿ ವರ್ತಿಸುತ್ತಿದೆ ಎಂಬುದನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ಈ ಕುರಿತು ಸಾರ್ವಜನಿಕರ ಅಭಿಪ್ರಾಯ ಕೂಡಾ ಸಂಗ್ರಹಿಸಲಾಗುತ್ತದೆ. ಒಟ್ಟಾರೆ ಠಾಣೆಯ ದೈನಂದಿನ ಕಾರ್ಯ ನಿರ್ವಹಣೆ ಮತ್ತು ಅಂತರ್ಜಾಲ ಹಾಗೂ ಸೈಬರ್ ತಂತ್ರಜ್ಞಾನದ ಅಳವಡಿಕೆ, ಹೀಗೆ ಹತ್ತು ಹಲವು ಮಾನದಂಡಗಳು ಇವೆ.

ಪೊಲೀಸ್ ಠಾಣೆಯ ಕುರಿತಾದ ಎಲ್ಲಾ ವಿವರಗಳನ್ನು ಹಾಗೂ ಪ್ರಶಸ್ತಿಗೆ ಬೇಕಾಗಿರುವ ಮಾನದಂಡಗಳನ್ನು ಕೇಂದ್ರ ಗೃಹ ಇಲಾಖೆಯ ಅಧಿಕಾರಿಗಳು ಖುದ್ದಾಗಿ ಹಾಗೂ ಖಾಸಗಿ ಏಜೆನ್ಸಿಗಳ ಮೂಲಕ ಸಂಗ್ರಹಿಸಿ, ಎಲ್ಲಾ ವಿವರಗಳ ಪರಾಮರ್ಶೆ ಮಾಡಿ ಪ್ರಶಸ್ತಿಯನ್ನು ನೀಡುತ್ತಾರೆ ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

5 minutes ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

14 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

15 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

1 day ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

2 days ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

2 days ago