Categories: ಬಳ್ಳಾರಿ

ಕರ್ನಾಟಕದ ತೆಕ್ಕಲಕೋಟೆ ಪೊಲೀಸ್ ಠಾಣೆಯು ದೇಶದ ಅತ್ತುತ್ತಮ 10ನೇ ಪೊಲೀಸ್ ಠಾಣೆಯಾಗಿ ಆಯ್ಕೆ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣೆಯು ದೇಶದ ಅತ್ತುತ್ತಮ 10ನೇ ಪೊಲೀಸ್ ಠಾಣೆಯಾಗಿ ಆಯ್ಕೆಯಾಗಿದೆ.

ಕೇಂದ್ರ ಗೃಹ ಸಚಿವಾಲಯ ನೀಡುವ ವಾರ್ಷಿಕ ಪ್ರಶಸ್ತಿಗೆ ಈ ಠಾಣೆ ಪಾತ್ರವಾಗಿದೆ. ಈ ಬಗ್ಗೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ತೆಕ್ಕಲಕೋಟೆ ಠಾಣೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಾರ್ಯದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾರ್ವಜನಿಕ ವಲಯದಲ್ಲೂ ಸಹ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕೇಂದ್ರದಿಂದ ಪ್ರಶಸ್ತಿ ಪತ್ರ ಬರುವುದಷ್ಟೇ ಬಾಕಿ ಇದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಒಬ್ಬರು ಪಿಎಸ್‌ಐ, ಇಬ್ಬರು ಎಎಸ್‌ಐ, 6 ಹೆಡ್ ಕಾನ್‌ಸ್ಟೇಬಲ್, 10 ಜನ ಪೊಲೀಸ್ ಕಾನ್‌ಸ್ಟೇಬಲ್, ಮೂವರು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್‌ಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ದೇಶದಲ್ಲಿರುವ 17,535 ಪೊಲೀಸ್ ಠಾಣೆಗಳ ಪೈಕಿ 78 ಠಾಣೆಗಳನ್ನು ಟಾಪ್ 10ರ ಆಯ್ಕೆಗಾಗಿ ಅಂತಿಮಗೊಳಿಸಲಾಗಿತ್ತು. ಇದರಲ್ಲಿ ಕರ್ನಾಟಕದಿಂದ ತೆಕ್ಕಲಕೋಟೆ, ಹಚೊಳ್ಳಿ ಪೊಲೀಸ್ ಠಾಣೆ ಮತ್ತು ಬೆಂಗಳೂರಿನ ಯಲಹಂಕ ನ್ಯೂ ಟೌನ್ ಠಾಣೆಗಳು ಸ್ಥಾನ ಪಡೆದಿದ್ದವು. ಅಂತಿಮವಾಗಿ ತೆಕ್ಕಲಕೋಟೆ ಅಗ್ರ ಹತ್ತರ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.

 ಅತ್ಯುತ್ತಮ ಠಾಣೆಯ ಪಟ್ಟಿಯಲ್ಲಿ ಸ್ಥಾನ ಪಡೆಯಲು ಹಲವು ಮಾನದಂಡಗಳಿವೆ. ಠಾಣೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಪರಾಮರ್ಶೆಗೆ ಒಳಪಡಿಸಿ, ಕೇಂದ್ರ ಗೃಹ ಇಲಾಖೆ ಈ ಪ್ರಶಸ್ತಿ ನೀಡುತ್ತದೆ.

ಪ್ರಶಸ್ತಿಗೆ ಇರುವ ಮಾನದಂಡಗಳು : ಪೊಲೀಸ್ ಠಾಣೆಯ ಸಮಗ್ರ ಕಾರ್ಯನಿರ್ವಹಣೆಯನ್ನು ಇದಕ್ಕಾಗಿ ಪರಿಗಣಿಸಲಾಗುತ್ತದೆ. ಜನಸ್ನೇಹಿಯಾಗಿ ಠಾಣೆಯೊಂದು ಎಷ್ಟು ಸಮರ್ಪಕವಾಗಿ ಕೆಲಸ ಮಾಡುತ್ತಿದೆ ಎಂಬುದರ ಕುರಿತು ಪರಿಗಣನೆಯಾಗುತ್ತದೆ.

ಸಿಬ್ಬಂದಿ ವರ್ತನೆ, ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಇತ್ಯರ್ಥದ ಶೇಕಡಾವಾರು, ಇತ್ಯರ್ಥವಾದ ಪ್ರಕರಣಗಳ ಸಮರ್ಪಕತೆ, ಪೊಲೀಸ್ ಠಾಣೆ ವತಿಯಿಂದ ಮಾಡಿರುವ ದಾಳಿಗಳ ಪ್ರಮಾಣ, ಠಾಣೆಯ ಮೂಲ ಸೌಕರ್ಯ, ಸಾರ್ವಜನಿಕರೊಂದಿಗಿನ ಠಾಣಾ ಸಿಬ್ಬಂದಿ ವ್ಯವಹಾರ, ವಿಶೇಷವಾಗಿ ಅಶಕ್ತರು, ವಿಕಲಚೇತನರು, ಮಹಿಳೆಯರೊಂದಿಗೆ ಪೊಲೀಸ್ ಠಾಣೆ ಎಷ್ಟು ಸ್ನೇಹಪೂರ್ವಕವಾಗಿ ವರ್ತಿಸುತ್ತಿದೆ ಎಂಬುದನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ಈ ಕುರಿತು ಸಾರ್ವಜನಿಕರ ಅಭಿಪ್ರಾಯ ಕೂಡಾ ಸಂಗ್ರಹಿಸಲಾಗುತ್ತದೆ. ಒಟ್ಟಾರೆ ಠಾಣೆಯ ದೈನಂದಿನ ಕಾರ್ಯ ನಿರ್ವಹಣೆ ಮತ್ತು ಅಂತರ್ಜಾಲ ಹಾಗೂ ಸೈಬರ್ ತಂತ್ರಜ್ಞಾನದ ಅಳವಡಿಕೆ, ಹೀಗೆ ಹತ್ತು ಹಲವು ಮಾನದಂಡಗಳು ಇವೆ.

ಪೊಲೀಸ್ ಠಾಣೆಯ ಕುರಿತಾದ ಎಲ್ಲಾ ವಿವರಗಳನ್ನು ಹಾಗೂ ಪ್ರಶಸ್ತಿಗೆ ಬೇಕಾಗಿರುವ ಮಾನದಂಡಗಳನ್ನು ಕೇಂದ್ರ ಗೃಹ ಇಲಾಖೆಯ ಅಧಿಕಾರಿಗಳು ಖುದ್ದಾಗಿ ಹಾಗೂ ಖಾಸಗಿ ಏಜೆನ್ಸಿಗಳ ಮೂಲಕ ಸಂಗ್ರಹಿಸಿ, ಎಲ್ಲಾ ವಿವರಗಳ ಪರಾಮರ್ಶೆ ಮಾಡಿ ಪ್ರಶಸ್ತಿಯನ್ನು ನೀಡುತ್ತಾರೆ ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

9 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

22 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago