ರಾಜ್ಯದಲ್ಲಿ ವಿಮಾನಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆಯು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ… ಈ ಹಿನ್ನೆಲೆ ವಿಮಾನ ನಿಲ್ದಾಣಗಳ ಸಂಖ್ಯೆಯೂ ಹೆಚ್ಚಾಗುತ್ತಿವೆ.
ವಿದೇಶಗಳಿಗೆ ಹಾಗೂ ಬೇರೆ ರಾಜ್ಯಗಳಿಗೆ ಹೋಗಬೇಕೆಂದರೆ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ವಿಮಾನಗಳನ್ನೇ ಅವಲಂಬಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣವಾಗಿವೆ.
ಕರ್ನಾಟಕ ರಾಜ್ಯದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಯಾದ ಶಿವಮೊಗ್ಗ ವಿಮಾನ ನಿಲ್ದಾಣ ಸೇರಿ, ಒಟ್ಟು 9 ವಿಮಾನ ನಿಲ್ದಾಣಗಳಿವೆ. ಹಾಗಾದರೆ ಇವುಗಳಲ್ಲಿ ಎಷ್ಟು ರಾಷ್ಟ್ರೀಯ, ಎಷ್ಟು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ…? ಹಾಗೂ ಈ ವಿಮಾನ ನಿಲ್ದಾಣಗಳ ವಿಶೇಷತೆಗಳು ಏನು..? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿದೆ ನೋಡಿ….
ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದಲ್ಲಿ ಒಟ್ಟು 9 ವಿಮಾನ ನಿಲ್ದಾಣಗಳು ಇವೆ. ಇವುಗಳಲ್ಲಿ 2 ಅಂತಾರಾಷ್ಟ್ರೀಯ, 2 ದೇಶಿಯ ವಿಮಾನ ನಿಲ್ದಾಣಗಳನ್ನು ಒಳಗೊಂಡಿವೆ. ಹಾಗಾದರೆ ಈ ವಿಮಾನ ನಿಲ್ದಾಣಗಳ ವಿಶೇಷತೆ ಕುರಿತು ಮಾಹಿತಿಯನ್ನು ಗಮನಿಸಿ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಪಟ್ಟಿ…
ಯಾವೆಲ್ಲಾ ವಿಶೇಷತೆಗಳನ್ನು ಒಳಗೊಂಡಿವೆ..?
1. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇವನಹಳ್ಳಿ, ಬೆಂಗಳೂರು
2. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಾಜಪೆ, ಮಂಗಳೂರು ಇವು ರಾಜ್ಯದಲ್ಲಿರುವ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣಗಳಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದ ವಿಶೇಷತೆ ಏನು?
ಕೆಂಪೇಗೌಡ ವಿಮಾನ ನಿಲ್ದಾಣ ಆರಂಭವಾಗಿದ್ದು ಯಾವಾಗ? ಈ ವಿಮಾಣ ನಿಲ್ದಾಣ ನಿರ್ಮಾಣ ಆಗಿದ್ದು ಹೇಗೆ?
ಮೂಲತಃ ಬೆಂಗಳೂರಿನಲ್ಲಿ ಮೊದಲಿಗೆ ಇದ್ದಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣ. ಇದನ್ನು 1942ರಲ್ಲಿ ಮಿಲಿಟರಿ ಮತ್ತು ರಕ್ಷಣಾ ಉದ್ದೇಶಗಳಿಗಾಗಿ ಸ್ಥಾಪನೆ ಮಾಡಲಾಯಿತು. ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ದೇಶೀಯ ಕಾರ್ಯಾಚರಣೆಗಳನ್ನು ಇಲ್ಲಿ ಪ್ರಾರಂಭ ಮಾಡಲಾಯಿತು. ದಿನೇ ದಿನೇ ಜನಸಂಖ್ಯೆ ಹೆಚ್ಚಾಗುತ್ತಿದಂತೆ ವಿಮಾನ ನಿಲ್ದಾಣದ ಅವಶ್ಯಕತೆ ಹೆಚ್ಚಾಯಿತು. ಆದ್ದರಿಂದ ಮಾರ್ಚ್ 1991ರಲ್ಲಿ ಭಾರತೀಯ ರಾಷ್ಟ್ರೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ನಿರ್ಧಾರ ಮಾಡಿತು.
ಈ ಸಂದರ್ಭದಲ್ಲಿ ಬೆಂಗಳೂರಿನ ಹತ್ತಿರವಿರುವ ದೇವನಹಳ್ಳಿಯಲ್ಲಿ 4,000 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗಿದ್ದೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವನ್ನು 2008ರ ಮೇ 24ರಂದು ಉದ್ಘಾಟನೆ ಮಾಡಲಾಯಿತು. ಇನ್ನು 2013ರ ಡಿಸೆಂಬರ್ 14ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ಇಡಲಾಯಿತು. ಆಗಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಂತಲೇ ಹೆಸರುವಾಸಿಯಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣದ ವಿಶೇಷತೆ ಹಾಗೂ ಯಾವೆಲ್ಲ ಸೌಲಭ್ಯಗಳನ್ನು ಒಳಗೊಂಡಿದೆ?
1. ಇದು ಕ್ಲೀನ್ಮ್ಯಾಕ್ಸ್ ಸೋಲಾರ್ ಅಭಿವೃದ್ಧಿಪಡಿಸಿದ ಕರ್ನಾಟಕದ ಮೊದಲ ಸಂಪೂರ್ಣ ಸೌರಶಕ್ತಿ ಚಾಲಿತ ವಿಮಾನ ನಿಲ್ದಾಣವಾಗಿದೆ.
2. ಈ ವಿಮಾಣ ನಿಲ್ದಾಣವು ಎರಡು ಟರ್ಮಿಲ್ಗಳನ್ನು ಒಳಗೊಂಡಿದೆ.
3. ಟರ್ಮಿನಲ್-1 ವಾರ್ಷಿಕ 40ಮಿಲಿಯನ್ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯವನ್ನು ಹೊಂದಿದೆ.
3. ಟರ್ಮಿನಲ್-2 ಏಷ್ಯಾದ ಗಾರ್ಡನ್ ಟರ್ಮಿನಲ್-2 ಆಗಿದೆ. 2.55 ಲಕ್ಷ ಚದರ ಮೀಟರ್ ವಿಸ್ತೀರ್ಣದಲ್ಲಿರುವ ಟರ್ಮಿನಲ್ ನಿರ್ಮಾಣಕ್ಕೆ 5 ಸಾವಿರ ಕೋಟಿ ರೂಪಾಯಿ ವೆಚ್ಚ ತಗುಲಿದೆ. ಇದು ವಾರ್ಷಿಕವಾಗಿ 5ರಿಂದ 6 ಕೋಟಿ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯವನ್ನು ಹೊಂದಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶೇಷತೆ ಏನು.?
1. ಭಾರತದಲ್ಲಿ ಮೂರು ವಿಮಾನ ನಿಲ್ದಾಣಗಳು ಮಾತ್ರ ಟೇಬಲ್ಟಾಪ್ ರನ್ವೇಗಳನ್ನು ಹೊಂದಿವೆ. ಇದರಲ್ಲಿ ಮಂಗಳೂರು ವಿಮಾನ ನಿಲ್ದಾಣವೂ ಕೂಡ ಒಂದಾಗಿದೆ.
2. 2000ರ ದಶಕದ ಪ್ರಾರಂಭದಲ್ಲಿ ಚಿಕ್ಕದಾಗಿದ್ದ ಇದರ ಟರ್ಮಿನಲ್ ಅನ್ನು ನವೀಕರಿಲಾಗಿದೆ.
3. 2006ರಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ದುಬೈಗೆ ಪ್ರಯಾಣ ಮಾಡುವ ಮೂಲಕ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಆರಂಭಿಸಿತು.
4. 28 ಸೆಪ್ಟೆಂಬರ್ 2012ರಂದು, ಏರ್ ಬಸ್ A310, ಮೊದಲ ಬಾರಿಗೆ ಇಲ್ಲಿ ಲ್ಯಾಂಡ್ ಆಗಿತ್ತು.
ದೇಶದದಲ್ಲಿನ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳಿಗೆ ಡೊಮೆಸ್ಟಿಕ್ ವಿಮಾನ ಎನ್ನುತ್ತಾರೆ. ಈ ವಿಮಾನಗಳು ಲ್ಯಾಂಡ್ ಆಗುವ ನಿಲ್ದಾಣಗಳನ್ನು ಡೊಮೆಸ್ಟಿಕ್ ವಿಮಾನ ನಿಲ್ದಾಣ ಎಂದು ಕರೆಯುತ್ತಾರೆ. ಈ ಡೊಮೆಸ್ಟಿಕ್ ವಿಮಾನಗಳು ಅಂತಾರಾಷ್ಟ್ರೀಯ ವಿಮಾನಲ್ದಾಣದಲ್ಲೂ ಕೂಡ ಲ್ಯಾಂಡ್ ಆಗುತ್ತವೆ.
ದೇಶಿಯ ವಿಮಾನ ನಿಲ್ದಾಣಗಳ ವಿವರ… ದೇಶಿಯ ವಿಮಾನ ನಿಲ್ದಾಣಗಳು ಯಾವುವು?
1. ಬೆಳಗಾವಿ ವಿಮಾನ ನಿಲ್ದಾಣ (ಸಾಂಬ್ರಾ)
2. ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣ
3. ಕಲಬುರಗಿ ವಿಮಾನ ನಿಲ್ದಾಣ
4. ಬೀದರ್ ವಿಮಾನ ನಿಲ್ದಾಣ
5. ಬಳ್ಳಾರಿ ವಿಮಾನ ನಿಲ್ದಾಣ
6. ಮೈಸೂರು ವಿಮಾನ ನಿಲ್ದಾಣ
7. ಶಿವಮೊಗ್ಗ ವಿಮಾನ ನಿಲ್ದಾಣ
ಬೆಳಗಾವಿ ವಿಮಾನ ನಿಲ್ದಾಣದ ವಿಶೇಷತೆಗಳು ಹಾಗೂ ಈ ವಿಮಾನ ನಿಲ್ದಾಣಕ್ಕಿರುವ ಮತ್ತೊಂದು ಹೆಸರೇನು?
1. ಈ ವಿಮಾನ ನಿಲ್ದಾಣದ ಸಮೀಪ, ಭಾರತೀಯ ವಾಯುಪಡೆಯ ನಿಲ್ದಾಣ ಇದ್ದು, ವಾಯುಪಡೆಗೆ ಹೊಸದಾಗಿ ನೇಮಕಗೊಳ್ಳುವರು ಇಲ್ಲಿ ತರಬೇತಿಯನ್ನು ಪಡೆಯುತ್ತಾರೆ. ಹಾಗೆಯೇ ಈ ವಿಮಾಣ ನಿಲ್ದಾಣದಲ್ಲಿ ಒಂದು ಟರ್ಮಿನಲ್ ಇದೆ.
2. ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಯ ಭಾಗವಾಗಿ 14 ಸೆಪ್ಟೆಂಬರ್ 2017 ರಂದು ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಯಿತು. ಟರ್ಮಿನಲ್ ಕಟ್ಟಡವು 3,600 ಚದರ ಮೀಟರ್ ವಿಸ್ತೀರ್ಣದಲ್ಲಿದೆ. ಮತ್ತು 300ಕ್ಕೂ ಹೆಚ್ಚು ಪ್ರಯಾಣಿಕರಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.
ವಾಯುಪಡೆ ನಿಲ್ದಾಣ ಕರ್ನಾಟಕದ ವಿಶೇಷ ಮೀಸಲು ಪಡೆ ಪೊಲೀಸರು 1948ರಲ್ಲಿ ವಾಯುನೆಲೆಯನ್ನು ತಮ್ಮ ವಶಕ್ಕೆ ಪಡೆದುಕೊಂಡರು. 1961ರಲ್ಲಿ ಆಪರೇಷನ್ ವಿಜಯ್ ಸಮಯದಲ್ಲಿ ವಾಯುಪಡೆಯ ಕೇಂದ್ರವು ವಾಯು ಕಾರ್ಯಾಚರಣೆಯ ಪ್ರಮುಖ ನೆಲೆಯಾಗಿತ್ತು. ಎರಡು ವರ್ಷಗಳ ನಂತರ, ಜಾಲಹಳ್ಳಿಯ ತರಬೇತಿ ಶಾಲೆಯನ್ನು ಸ್ಥಳಾಂತರಿಸಲಾಯಿತು.
ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣವು ಯಾವೆಲ್ಲ ವಿಶೇಷತೆಗಳನ್ನು ಒಳಗೊಂಡಿದೆ?
1. ಈ ವಿಮಾನ ನಿಲ್ದಾಣದಲ್ಲಿ ಒಂದು ಟರ್ಮಿನಲ್ ಇದೆ. ಇದರಲ್ಲಿ ಕಾರ್ಗೋ ಟರ್ಮಿನಲ್ ಕೂಡ ಇದೆ.
4. ಇಲ್ಲಿ ಡೊಮೆಸ್ಟಿಕ್ ಕಾರ್ಗೋ ಕಾಂಪ್ಲೆಕ್ಸ್ ಇದ್ದು, ಮಾರ್ಚ್ 2021ರಲ್ಲಿ ಕಾರ್ಯಾಚರಣೆಯನ್ನು ಆರಂಭಿಸಲಾಯಿತು. ಇದು ಉತ್ತರ ಕರ್ನಾಟಕದ ಮೊದಲ ಮೀಸಲಾದ ದೇಶೀಯ ಏರ್ ಕಾರ್ಗೋ ಟರ್ಮಿನಲ್ ಆಗಿದೆ.
ಕಲಬುರಗಿ ವಿಮಾನ ನಿಲ್ದಾಣದ ವಿಶೇಷತೆಗಳು ಹಾಗೂ
ವಿಮಾನ ನಿಲ್ದಾಣ ನಿರ್ಮಾಣಕ್ಕೆ ತಗುಲಿದ ವೆಚ್ಚ ಎಷ್ಟು?
ಬೀದರ್ ವಿಮಾನ ನಿಲ್ದಾಣದ ವಿಶೇಷತೆಗಳು ಹಾಗೂ
ಈ ವಿಮಾನ ನಿಲ್ದಾಣ ಯಾವುದಕ್ಕೆ ಪ್ರಸಿದ್ಧಿ..?
ಬಳ್ಳಾರಿ ವಿಮಾನ ನಿಲ್ದಾಣದ ವಿಶೇಷತೆಗಳು.. ಈ ವಿಮಾನ ನಿಲ್ದಾಣಕ್ಕಿರುವ ಮತ್ತೊಂದು ಹೆಸರೇನು?
ಈ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಜಿಂದಾಲ್ ವಿಜಯನಗರ ಸ್ಟೀಲ್ ಲಿಮಿಟೆಡ್ನಿಂದ ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಜೆವಿಎಸ್ಎಲ್ 2005ರಲ್ಲಿ JSW ಸ್ಟೀಲ್ನಲ್ಲಿ ವಿಲೀನಗೊಂಡಿತ್ತು. 2004ರಲ್ಲಿ ಕರ್ನಾಟಕ ಸರ್ಕಾರ ಇದನ್ನು ಸ್ವಯತ್ತತೆ ಪಡೆದ ಮೇಲೆ 2006ರ ಡಿಸೆಂಬರ್ನಿಂದ ಸಾರ್ವಜನಿಕರ ಪ್ರಯಾಣ ಪ್ರಾರಂಭಿಸಿತು.
ಮೈಸೂರು ವಿಮಾನ ನಿಲ್ದಾಣದ ವಿಶೇಷತೆಗಳು…
ಶಿವಮೊಗ್ಗ ವಿಮಾನ ನಿಲ್ದಾಣದ ವಿಶೇಷತೆ
1. ಇದು ರಾಜ್ಯದ 2ನೇ ಅತಿ ದೊಡ್ಡ ವಿಮಾನ ನಿಲ್ದಾಣ ಎನ್ನುವ ಹೆಗ್ಗಳಿಕೆ ಪಡೆದಿಕೊಂಡಿದ್ದು, ಒಟ್ಟು 662.38 ಹೆಕ್ಟೇರ್ ವಿಸ್ತಿರ್ಣದಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ.
2. 449 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಮಾಣ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. ಇದು 3.2 ಕಿಲೋ ಮೀಟರ್ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ.
3. 4320 ಚದರ ಅಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಅನ್ನು ನಿರ್ಮಾಣ ಮಾಡಲಾಗಿದೆ.
4. ಈ ವಿಮಾನ ನಿಲ್ದಾಣದ ನಿರ್ಮಾಣ ಒಟ್ಟು ವೆಚ್ಚ ಸುಮಾರು 600 ಕೋಟಿ ರೂ. ಆಗಿದೆ. ವಿಮಾನ ನಿಲ್ದಾಣದ ಮೂಲಸೌಕರ್ಯಕ್ಕಾಗಿ ಇದರಲ್ಲಿ 449 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ. ಉಳಿದ ಮೊತ್ತವು ವಿಮಾನ ನಿಲ್ದಾಣದ ಭೂಸ್ವಾಧೀನಕ್ಕೆ ಬಳಕೆ ಮಾಡಲಾಗಿದೆ.
5. ಈ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದ ಉದಾನ್ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಈ ಕುವೆಂಪು ವಿಮಾನ ನಿಲ್ದಾಣವು ಕರ್ನಾಟಕದ ಎರಡನೇ ದೊಡ್ಡ ರನ್ ವೇ ಹೊಂದಿದೆ. ಇವುಗಳು ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿಮಾನ ನಿಲ್ದಾಣಗಳಾಗಿವೆ. ಇವುಗಳನ್ನು ಹೊರತುಪಡಿಸಿ ಮುಂದಿನ ದಿನಗಳಲ್ಲಿ ವಿಜಯಪುರ ಮತ್ತು ಹಾಸನದಲ್ಲಿ ನೂತನ ವಿಮಾನ ನಿಲ್ದಾಣಗಳು ಕಾರ್ಯಾರಂಭ ಆಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗೆ ರಾಜ್ಯದಲ್ಲಿರುವ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ವಿವರನ್ನು ನೀಡಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…