ಕರ್ನಾಟಕವನ್ನು ಆಳ್ವಿಕೆ ಮಾಡಿದ ರಾಜರುಗಳ ಜೀವನಚರಿತ್ರೆ ಕನ್ನಡಿಗರಿಗೆ ಸ್ಫೂರ್ತಿ: ಉಪನ್ಯಾಸಕಿ ಟಿ.ಎಸ್.ಸರಸ್ವತಿ

 

ಕರ್ನಾಟಕ ಸಾಂಸ್ಕೃತಿಕ ಪರಂಪರೆಯ ಬೆಳವಣಿಗೆಯಲ್ಲಿ  ನೃಪತುಂಗನಿಂದ ಮೈಸೂರಿನ ಅರಸು ಮನೆತನದ ತನಕ  ಆಳ್ವಿಕೆ ಮಾಡಿದ ರಾಜರ ಕೊಡುಗೆ ಮಹತ್ವದಾಗಿದೆ ಎಂದು ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ  ಉಪನ್ಯಾಸಕಿ ಟಿ.ಎಸ್.ಸರಸ್ವತಿ ತಿಳಿಸಿದರು.

ನಗರದ ಜ್ಞಾನಗಂಗಾ ವಿದ್ಯಾಸಂಸ್ಥೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಡಿ.ವಿ.ಪದ್ಮಾವತಮ್ಮ ಶೈಕ್ಷಣಿಕ ದತ್ತಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿಗೆ ರಾಜರ ಕೊಡುಗೆ ಎಂಬ ವಿಷಯವನ್ನು ಕುರಿತು ಮಾತನಾಡಿದರು. ಕನ್ನಡ ಸಾಹಿತ್ಯ, ಕಲೆ, ರಂಗಭೂಮಿ ಕರ್ನಾಟಕದಲ್ಲಿ   ಶ್ರೀಮಂತಗೊಳ್ಳಲು ಕವಿಗಳಿಗೆ, ಕಲಾವಿದರಿಗೆ, ಶಿಲ್ಪಿಗಳಿಗೆ ರಾಜರು ಆಶ್ರಯ ನೀಡುವ ಮೂಲಕ‌ ಪ್ರೋತ್ಸಾಹ ನೀಡಿದರು. ಅನ್ಯ ಧರ್ಮ ಸಹಿಷ್ಣುತೆಯನ್ನು  ಸಾಕಾರಗೊಳಿಸಿದ್ದ ರಾಜ ಮನೆತನಗಳು ಎಲ್ಲಾ ಧಾರ್ಮಿಕ ಚಟುವಟಿಕೆಗಳನ್ನು ಗೌರವಿಸುತ್ತಾ ಬಂದಿದ್ದರು. ಕರ್ನಾಟಕವನ್ನು ಆಳ್ವಿಕೆ ಮಾಡಿದ ರಾಜರುಗಳ ಜೀವನಚರಿತ್ರೆಗಳು ಕನ್ನಡಿಗರಿಗೆ ಸ್ಫೂರ್ತಿಯಾಗಿವೆ ಎಂದರು.

ಕನ್ನಡದ ವಚನ ಸಾಹಿತ್ಯ ವಿಶ್ವಸಾಹಿತ್ಯದ ಮಟ್ಟದಲ್ಲಿ ಗೌರವಗೊಳಲು ಬಸವಣ್ಣ ‌ಮೊದಲಾದ ವಚನಕಾರರು ಕಾರಣರಾದರು. ಹರಿದಾಸರು ಕನ್ನಡನಾಡಿನ ಭಕ್ತಿ ಸಾಹಿತ್ಯವನ್ನು ಉನ್ನತಗೊಳಿಸಿದರು. ಮೈಸೂರಿನ  ಒಡೆಯರು ದಸರಾ ಸಾಂಸ್ಕೃತಿಕ ಪರಂಪರೆಯನ್ನು ಪ್ರಾರಂಭಿಸಿ, ಕನ್ನಡ ನಾಡಿನ ಸಾಂಸ್ಕೃತಿಕ ವೈವಿಧ್ಯಮಯನ್ನು ಜಗತ್ತಿಗೆ ಪರಿಚಯಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಸ್ಥಾಪನೆಗೊಂಡಿರುವುದು ಕನ್ನಡ ಸಾಹಿತ್ಯ ಪರಿಷತ್ತು. ಕನ್ನಡ ಸಾಂಸ್ಕೃತಿಕ ಪರಂಪರೆ ಉಳಿದು ಬೆಳೆಯಬೇಕಾದರೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಹಂತದಲ್ಲಿಯೇ ಕಲೆ ಮತ್ತು ಸಾಹಿತ್ಯ ಅಭಿರುಚಿ ಮೂಡಿಸಬೇಕಾಗಿದೆ. ಕನ್ನಡ ಪುಸ್ತಕಗಳ ಓದಿನಿಂದ  ಜ್ಣಾನದೊಂದಿಗೆ ನಮ್ಮ ಪರಂಪರೆಯನ್ನು ಅರಿಯಲು ಸಹಕಾರವಾಗುತ್ತದೆ ಎಂದರು.

ದತ್ತಿ ದಾನಿಗಳಾದ ಡಿ.ವಿ.ಪದ್ಮಾವತಮ್ಮ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ರೂಪದಲ್ಲಿ ಬಹುಮಾನ ನೀಡಲು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಲಾಗಿದೆ. ಕನ್ನಡ ಭಾಷೆ ಉಳಿಸುವುದೆಂದರೆ  ಕನ್ನಡವನ್ನು ಓದುವುದು, ಬರೆಯುವುದು ಮತ್ತು ಮಾತನಾಡುವ ಮೂಲಕ ಮಾತ್ರ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಸೃಜನಶೀಲ ಚಿಂತನೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬದಲಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  125 ಅಂಕಗಳಿಗೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಕನ್ನಡ ಶಿಕ್ಷಕರು ಅಭಿನಂದಿಸಿದರು.

ಸಮಾರಂಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಶಿಕ್ಷಣ ಸಂಯೋಜಕ ಗಂಗಾಧರ್, ಕಲಾವಿದ ಹಣಬೆ ನಾಗರಾಜು, ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಹನುಮೇಗೌಡ, ಸಹ್ಯಾದ್ರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಗದೀಶ್, ಕನ್ನಡ ಶಿಕ್ಷಕರುಗಳಾದ ರವಿಕುಮಾರ್, ರಮೇಶ್,  ಸುಜಾತ, ಮಂಜುನಾಥ್, ನಂಜುಂಡರಾವ್, ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

11 minutes ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

5 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

7 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

8 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

12 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

22 hours ago