ಕರ್ನಾಟಕವನ್ನು ಆಳ್ವಿಕೆ ಮಾಡಿದ ರಾಜರುಗಳ ಜೀವನಚರಿತ್ರೆ ಕನ್ನಡಿಗರಿಗೆ ಸ್ಫೂರ್ತಿ: ಉಪನ್ಯಾಸಕಿ ಟಿ.ಎಸ್.ಸರಸ್ವತಿ

 

ಕರ್ನಾಟಕ ಸಾಂಸ್ಕೃತಿಕ ಪರಂಪರೆಯ ಬೆಳವಣಿಗೆಯಲ್ಲಿ  ನೃಪತುಂಗನಿಂದ ಮೈಸೂರಿನ ಅರಸು ಮನೆತನದ ತನಕ  ಆಳ್ವಿಕೆ ಮಾಡಿದ ರಾಜರ ಕೊಡುಗೆ ಮಹತ್ವದಾಗಿದೆ ಎಂದು ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ  ಉಪನ್ಯಾಸಕಿ ಟಿ.ಎಸ್.ಸರಸ್ವತಿ ತಿಳಿಸಿದರು.

ನಗರದ ಜ್ಞಾನಗಂಗಾ ವಿದ್ಯಾಸಂಸ್ಥೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಡಿ.ವಿ.ಪದ್ಮಾವತಮ್ಮ ಶೈಕ್ಷಣಿಕ ದತ್ತಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿಗೆ ರಾಜರ ಕೊಡುಗೆ ಎಂಬ ವಿಷಯವನ್ನು ಕುರಿತು ಮಾತನಾಡಿದರು. ಕನ್ನಡ ಸಾಹಿತ್ಯ, ಕಲೆ, ರಂಗಭೂಮಿ ಕರ್ನಾಟಕದಲ್ಲಿ   ಶ್ರೀಮಂತಗೊಳ್ಳಲು ಕವಿಗಳಿಗೆ, ಕಲಾವಿದರಿಗೆ, ಶಿಲ್ಪಿಗಳಿಗೆ ರಾಜರು ಆಶ್ರಯ ನೀಡುವ ಮೂಲಕ‌ ಪ್ರೋತ್ಸಾಹ ನೀಡಿದರು. ಅನ್ಯ ಧರ್ಮ ಸಹಿಷ್ಣುತೆಯನ್ನು  ಸಾಕಾರಗೊಳಿಸಿದ್ದ ರಾಜ ಮನೆತನಗಳು ಎಲ್ಲಾ ಧಾರ್ಮಿಕ ಚಟುವಟಿಕೆಗಳನ್ನು ಗೌರವಿಸುತ್ತಾ ಬಂದಿದ್ದರು. ಕರ್ನಾಟಕವನ್ನು ಆಳ್ವಿಕೆ ಮಾಡಿದ ರಾಜರುಗಳ ಜೀವನಚರಿತ್ರೆಗಳು ಕನ್ನಡಿಗರಿಗೆ ಸ್ಫೂರ್ತಿಯಾಗಿವೆ ಎಂದರು.

ಕನ್ನಡದ ವಚನ ಸಾಹಿತ್ಯ ವಿಶ್ವಸಾಹಿತ್ಯದ ಮಟ್ಟದಲ್ಲಿ ಗೌರವಗೊಳಲು ಬಸವಣ್ಣ ‌ಮೊದಲಾದ ವಚನಕಾರರು ಕಾರಣರಾದರು. ಹರಿದಾಸರು ಕನ್ನಡನಾಡಿನ ಭಕ್ತಿ ಸಾಹಿತ್ಯವನ್ನು ಉನ್ನತಗೊಳಿಸಿದರು. ಮೈಸೂರಿನ  ಒಡೆಯರು ದಸರಾ ಸಾಂಸ್ಕೃತಿಕ ಪರಂಪರೆಯನ್ನು ಪ್ರಾರಂಭಿಸಿ, ಕನ್ನಡ ನಾಡಿನ ಸಾಂಸ್ಕೃತಿಕ ವೈವಿಧ್ಯಮಯನ್ನು ಜಗತ್ತಿಗೆ ಪರಿಚಯಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಸ್ಥಾಪನೆಗೊಂಡಿರುವುದು ಕನ್ನಡ ಸಾಹಿತ್ಯ ಪರಿಷತ್ತು. ಕನ್ನಡ ಸಾಂಸ್ಕೃತಿಕ ಪರಂಪರೆ ಉಳಿದು ಬೆಳೆಯಬೇಕಾದರೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು ಹಂತದಲ್ಲಿಯೇ ಕಲೆ ಮತ್ತು ಸಾಹಿತ್ಯ ಅಭಿರುಚಿ ಮೂಡಿಸಬೇಕಾಗಿದೆ. ಕನ್ನಡ ಪುಸ್ತಕಗಳ ಓದಿನಿಂದ  ಜ್ಣಾನದೊಂದಿಗೆ ನಮ್ಮ ಪರಂಪರೆಯನ್ನು ಅರಿಯಲು ಸಹಕಾರವಾಗುತ್ತದೆ ಎಂದರು.

ದತ್ತಿ ದಾನಿಗಳಾದ ಡಿ.ವಿ.ಪದ್ಮಾವತಮ್ಮ ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ರೂಪದಲ್ಲಿ ಬಹುಮಾನ ನೀಡಲು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಲಾಗಿದೆ. ಕನ್ನಡ ಭಾಷೆ ಉಳಿಸುವುದೆಂದರೆ  ಕನ್ನಡವನ್ನು ಓದುವುದು, ಬರೆಯುವುದು ಮತ್ತು ಮಾತನಾಡುವ ಮೂಲಕ ಮಾತ್ರ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಸೃಜನಶೀಲ ಚಿಂತನೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬದಲಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  125 ಅಂಕಗಳಿಗೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಕನ್ನಡ ಶಿಕ್ಷಕರು ಅಭಿನಂದಿಸಿದರು.

ಸಮಾರಂಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಶಿಕ್ಷಣ ಸಂಯೋಜಕ ಗಂಗಾಧರ್, ಕಲಾವಿದ ಹಣಬೆ ನಾಗರಾಜು, ಜ್ಞಾನಗಂಗಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಹನುಮೇಗೌಡ, ಸಹ್ಯಾದ್ರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಗದೀಶ್, ಕನ್ನಡ ಶಿಕ್ಷಕರುಗಳಾದ ರವಿಕುಮಾರ್, ರಮೇಶ್,  ಸುಜಾತ, ಮಂಜುನಾಥ್, ನಂಜುಂಡರಾವ್, ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

4 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

4 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

8 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

20 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

23 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago