ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರನ್ನು ಒಗ್ಗೂಡಿಸಿತು- ಕವಿ‌ ಕೆ.ಎಂ.ಮಹಾದೇವಪ್ಪ

ಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರನ್ನು ಒಗ್ಗೂಡಿಸಿತು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಲು ಬೆಳೆಸಲು ಸಹಕಾರಿಯಾಯಿತು ಎಂದು  ಪ್ರಾಧ್ಯಾಪಕ ಮತ್ತು ಕವಿ‌ ಕೆ.ಎಂ. ಮಹಾದೇವಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಕರ್ನಾಟಕ ಏಕೀಕರಣ ಚಳುವಳಿ ಎಂಬ ವಿಷಯ ಕುರಿತು ಉಪನ್ಯಾಸ ಮತ್ತು ಕಲಾವಿದರಿಗೆ ಸನ್ಮಾನ  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಭಾಷಿಗರ ನಾಡನ್ನು ಒಗ್ಗೂಡಿಸಲು  ಭಾರತ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೇ ಕರ್ನಾಟಕ ಏಕೀಕರಣ ಹೋರಾಟ ಪ್ರಾರಂಭವಾಯಿತು. ಹಲವು  ಹೋರಾಟಗಳು, ಹೋರಾಟಗಾರರ ಶ್ರಮದಿಂದ ಕನ್ನಡ ನಾಡು ಒಂದು ರಾಜ್ಯವಾಗಿ ಉದಯವಾಯಿತು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಪಿ.ಮಲ್ಲಾರಾಜು ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ‌ ವ್ಯಾಸಂಗ ಮಾಡಿದವರು ಸಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಓದಿದವರು ಖ್ಯಾತ ವಿಜ್ಞಾನಿಗಳು ಆಗಿದ್ದಾರೆ.
ಸಾವಿರಾರು ವರ್ಷಗಳ‌ ಇತಿಹಾಸವಿರುವ ಕನ್ನಡ ಭಾಷೆ  ಮತ್ತು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ  ದೊರೆಯಬೇಕೆಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ನಾಡಿನ ಪ್ರತಿಯೊಬ್ಬರು ಕನ್ನಡ‌‌ದ   ಅಸ್ಮಿತೆ ಮತ್ತು ಅನನ್ಯತೆ ಬಗ್ಗೆ ಹೆಮ್ಮೆ ಪಡಬೇಕು. ಕರ್ನಾಟಕ ರಾಜ್ಯದಲ್ಲಿ  ಕನ್ನಡವೇ ನಮ್ಮೆಲ್ಲರ ಆದ್ಯತೆಯ ವಿಚಾರವಾಗಬೇಕು. ಕನ್ನಡ ಕಾರ್ಯಕ್ರಮಗಳು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಿರಬಾರದು. ಪ್ರತಿದಿನವು  ಕನ್ನಡತನ ನಮ್ಮ ಬದುಕಿನ ಭಾಗಬೇಕು. ಕನ್ನಡಿಗರಿಗೆ  ಕನ್ನಡ  ಭಾಷೆಯಲ್ಲಿ ಜ್ಞಾನವನ್ನು ನೀಡಿದರೆ ಹೆಚ್ಚು ಪರಿಣಾಮಕಾರಿಯಾಗಿ ಅರ್ಥವಾಗುತ್ತದೆ, ಮಾತೃಭಾಷೆಯಿಂದ ಜ್ಞಾನ ಹೆಚ್ಚಾಗುತ್ತದೆ ಎಂದು ಅನೇಕ ಸಂಶೋಧನೆಗಳು ತಿಳಿಸಿವೆ ಎಂದರು.

ಕಲಾವಿದರಿಗೆ ಸನ್ಮಾನ : ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಲಾವಿದರುಗಳಾದ  ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ, ಕುಮಾರ್, ಶೋಭಾಕುಮಾರ್, ಅಣ್ಣಪ್ಪ, ಸತ್ಯಜಿತ್ ಅವರನ್ನು  ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ‌ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು,  ಹಣಬೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹರೀಶ್, ವೆಂಕಟೇಶ್,  ಪಂಚಾಯಿತಿ ಅಧಿಕಾರಿ ಗಂಗರಾಜು, ಮುಖ್ಯಶಿಕ್ಷಕಿ ಶಾಂತಮ್ಮ, ಶಿಕ್ಷಕ ಮತ್ತು ಕಲಾವಿದ ಹಣಬೆ ನಾಗರಾಜು, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ, ಸಿಬ್ಬಂದಿಯವರಾದ ಮಹಾದೇವಸ್ವಾಮಿ, ಶಶಿಕಾಂತ್, ಶಾರದಮ್ಮ, ಯಮುನಾವ್ವ ಖನ್ನಾಳ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

18 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago