ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಸಹಿ ಹಾಕಿದ ಹಿನ್ನೆಲೆ ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿದೆ. ಈ ಹಿನ್ನೆಲೆ, ಈ ಸುಗ್ರೀವಾಜ್ಞೆ ಜಾರಿಗೆ ಬಂದಂತಾಗಿದೆ.
ರಾಜ್ಯಪಾಲರ ಸಲಹೆಗಳು
* ಈ ಸುಗ್ರೀವಾಜ್ಞೆಯನ್ನು ತಪ್ಪು ಗ್ರಹಿಕೆ ಅಥವಾ ದುರ್ಬಳಕೆ ಮಾಡಿಕೊಂಡು ಆರ್ಬಿಐ ನೋಂದಾಯಿತ ಮತ್ತು ನಿಯಂತ್ರಿತ ಹಣಕಾಸು ಸಂಸ್ಥೆಗಳಿಗೆ ಕಿರುಕುಳ ನೀಡಬಾರದು
* ಕಾನೂನುಬದ್ಧ ಮತ್ತು ನಿಜವಾದ ಸಾಲದಾತರು ಬಡ್ಡಿ ಮತ್ತು ಅಸಲು ವಸೂಲಿ ಮಾಡಲು ತೊಂದರೆ ಆಗಬಾರದು. ಅಂತಹ ಸಾಲದಾತರು ನೀಡಿದ್ದ ಸಾಲವನ್ನು ಮರಳಿ ಪಡೆಯಲು ಯಾವುದೇ ಪರಿಹಾರ ಸುಗ್ರೀವಾಜ್ಞೆಯಲ್ಲಿ ಇಲ್ಲ. ಇದು ಕಾನೂನು ಹೋರಾಟಕ್ಕೆ ಕಾರಣ ಆಗಬಹುದು
* ಸಹಜ ನ್ಯಾಯದ ಭಾಗವಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಹಕ್ಕು ಮತ್ತು ಕಾನೂನು ಪರಿಹಾರಕ್ಕೆ ಹೋರಾಟ ನಡೆಸುವ ಅವಕಾಶವಿದೆ. ಯಾರೇ ಆದರೂ ಹೋರಾಟ ನಡೆಸದಂತೆ ತಡೆಯುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣ ಆಗಬಹುದು. ರಾಜ್ಯ ಸರ್ಕಾರ ಈ ಕುರಿತು ಮರುಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು
* ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸುವ ಸಂದರ್ಭದಲ್ಲಿ ಈ ಮೇಲಿನ ಅಂಶಗಳನ್ನು ಸೇರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಈ ಎಲ್ಲ ಅಂಶಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕು.
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…