ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರ್ ಚಂದ್‌ ಗೆಹಲೋಟ್ ಅಂಕಿತ: ಗೆಜೆಟ್‌ ಹೊರಡಿಸಿದ ರಾಜ್ಯ ಸರ್ಕಾರ

ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರ್ ಚಂದ್‌ ಗೆಹಲೋಟ್ ಸಹಿ ಹಾಕಿದ ಹಿನ್ನೆಲೆ ರಾಜ್ಯ ಸರ್ಕಾರ ಗೆಜೆಟ್‌ ಹೊರಡಿಸಿದೆ. ಈ ಹಿನ್ನೆಲೆ, ಈ ಸುಗ್ರೀವಾಜ್ಞೆ ಜಾರಿಗೆ ಬಂದಂತಾಗಿದೆ.

ರಾಜ್ಯಪಾಲರ ಸಲಹೆಗಳು

* ಈ ಸುಗ್ರೀವಾಜ್ಞೆಯನ್ನು ತಪ್ಪು ಗ್ರಹಿಕೆ ಅಥವಾ ದುರ್ಬಳಕೆ ಮಾಡಿಕೊಂಡು ಆರ್‌ಬಿಐ ನೋಂದಾಯಿತ ಮತ್ತು ನಿಯಂತ್ರಿತ ಹಣಕಾಸು ಸಂಸ್ಥೆಗಳಿಗೆ ಕಿರುಕುಳ ನೀಡಬಾರದು

* ಕಾನೂನುಬದ್ಧ ಮತ್ತು ನಿಜವಾದ ಸಾಲದಾತರು ಬಡ್ಡಿ ಮತ್ತು ಅಸಲು ವಸೂಲಿ ಮಾಡಲು ತೊಂದರೆ ಆಗಬಾರದು. ಅಂತಹ ಸಾಲದಾತರು ನೀಡಿದ್ದ ಸಾಲವನ್ನು ಮರಳಿ ಪಡೆಯಲು ಯಾವುದೇ ಪರಿಹಾರ ಸುಗ್ರೀವಾಜ್ಞೆಯಲ್ಲಿ ಇಲ್ಲ. ಇದು ಕಾನೂನು ಹೋರಾಟಕ್ಕೆ ಕಾರಣ ಆಗಬಹುದು

* ಸಹಜ ನ್ಯಾಯದ ಭಾಗವಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಹಕ್ಕು ಮತ್ತು ಕಾನೂನು ಪರಿಹಾರಕ್ಕೆ ಹೋರಾಟ ನಡೆಸುವ ಅವಕಾಶವಿದೆ. ಯಾರೇ ಆದರೂ ಹೋರಾಟ ನಡೆಸದಂತೆ ತಡೆಯುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣ ಆಗಬಹುದು. ರಾಜ್ಯ ಸರ್ಕಾರ ಈ ಕುರಿತು ಮರುಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು

* ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸುವ ಸಂದರ್ಭದಲ್ಲಿ ಈ ಮೇಲಿನ ಅಂಶಗಳನ್ನು ಸೇರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಈ ಎಲ್ಲ ಅಂಶಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

47 minutes ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

18 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago