ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಸಹಿ ಹಾಕಿದ ಹಿನ್ನೆಲೆ ರಾಜ್ಯ ಸರ್ಕಾರ ಗೆಜೆಟ್ ಹೊರಡಿಸಿದೆ. ಈ ಹಿನ್ನೆಲೆ, ಈ ಸುಗ್ರೀವಾಜ್ಞೆ ಜಾರಿಗೆ ಬಂದಂತಾಗಿದೆ.
ರಾಜ್ಯಪಾಲರ ಸಲಹೆಗಳು
* ಈ ಸುಗ್ರೀವಾಜ್ಞೆಯನ್ನು ತಪ್ಪು ಗ್ರಹಿಕೆ ಅಥವಾ ದುರ್ಬಳಕೆ ಮಾಡಿಕೊಂಡು ಆರ್ಬಿಐ ನೋಂದಾಯಿತ ಮತ್ತು ನಿಯಂತ್ರಿತ ಹಣಕಾಸು ಸಂಸ್ಥೆಗಳಿಗೆ ಕಿರುಕುಳ ನೀಡಬಾರದು
* ಕಾನೂನುಬದ್ಧ ಮತ್ತು ನಿಜವಾದ ಸಾಲದಾತರು ಬಡ್ಡಿ ಮತ್ತು ಅಸಲು ವಸೂಲಿ ಮಾಡಲು ತೊಂದರೆ ಆಗಬಾರದು. ಅಂತಹ ಸಾಲದಾತರು ನೀಡಿದ್ದ ಸಾಲವನ್ನು ಮರಳಿ ಪಡೆಯಲು ಯಾವುದೇ ಪರಿಹಾರ ಸುಗ್ರೀವಾಜ್ಞೆಯಲ್ಲಿ ಇಲ್ಲ. ಇದು ಕಾನೂನು ಹೋರಾಟಕ್ಕೆ ಕಾರಣ ಆಗಬಹುದು
* ಸಹಜ ನ್ಯಾಯದ ಭಾಗವಾಗಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಹಕ್ಕು ಮತ್ತು ಕಾನೂನು ಪರಿಹಾರಕ್ಕೆ ಹೋರಾಟ ನಡೆಸುವ ಅವಕಾಶವಿದೆ. ಯಾರೇ ಆದರೂ ಹೋರಾಟ ನಡೆಸದಂತೆ ತಡೆಯುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣ ಆಗಬಹುದು. ರಾಜ್ಯ ಸರ್ಕಾರ ಈ ಕುರಿತು ಮರುಚಿಂತನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು
* ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡಿಸುವ ಸಂದರ್ಭದಲ್ಲಿ ಈ ಮೇಲಿನ ಅಂಶಗಳನ್ನು ಸೇರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಈ ಎಲ್ಲ ಅಂಶಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚೆ ನಡೆಸಬೇಕು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…