ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 12 ಕೆಜಿ ಚಿನ್ನ, 15 ಲಕ್ಷ ಹಣ ಕದ್ದೋಯ್ದಿದ್ದ ಖದೀಮರು; ಬ್ಯಾಂಕ್ ದರೋಡೆಕೋರರ ಬಂಧನ

ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ‌ ಗ್ರಾಮೀಣ ಬ್ಯಾಂಕ್ ಲೂಟಿ‌ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಉತ್ತರ ಪ್ರದೇಶದ ಪೊಲೀಸರ ಸಹಕಾರದಿಂದ ಇಬ್ಬರು ಖದೀಮರನ್ನು ಗುರುವಾರ ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದಾರೆ.

ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್ ಬಂಧಿತ ಆರೋಪಿಗಳು.

ಟ್ರಕ್ ನಲ್ಲಿ ಬಂದು ಲೂಟಿ:

ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.

ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.

ಗ್ಯಾಸ್ ಕಟರ್ ಮೂಲಕ ಶೆಟರ್ ಹಾಗೂ ಲಾಕರ್ ತೆರೆದು 12 ಕೆ.ಜಿ. ಚಿನ್ನಾಭರಣ ಹಾಗೂ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಬಹಳ ದಿನಗಳಿಂದ ಹೊಂಚು ಹಾಕಿದ ಕಳ್ಳರು, ಬ್ಯಾಂಕ್ ಬಳಿ ಚಲನವಲನಗಳನ್ನು ಗಮನಿಸಿ ಕಳುವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ‌ ಸೆರೆಯಾಗಿದ್ದ ಟ್ರಕ್ ಪತ್ತೆ ಹಚ್ಚಿ ಹೋದ ಪೊಲೀಸರಿಗೆ ಆರೋಪಿಗಳ ಮಹತ್ವದ ಸುಳಿವು‌ ಸಿಕ್ಕಿದೆ. ಅಲಾಪುರದ ಕಾಕರಾಲ ಪೊಲೀಸರ ನೆರವು ಪಡೆದು, ಆರೋಪಿಗಳನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ಕೌಟುಂಬಿಕ ಸಂಘರ್ಷ………

ಕುಟುಂಬದ ಘರ್ಷಣೆಗಳು ಟಿವಿ ಮಾಧ್ಯಮಗಳಲ್ಲಿ ಪ್ರಚಾರವಾಗುವುದರಿಂದ ಪರಿಹಾರ ಸಾಧ್ಯವೇ. ಅವರಿಗೆ ಅಷ್ಟು ಜ್ಞಾನ ಮತ್ತು ಸಾಮರ್ಥ್ಯ ಇದೆಯೇ.... ಕೌಟುಂಬಿಕ ಸಮಸ್ಯೆಗಳಿಗೆ,…

3 minutes ago

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

9 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

12 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

12 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

13 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

14 hours ago