ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 12 ಕೆಜಿ ಚಿನ್ನ, 15 ಲಕ್ಷ ಹಣ ಕದ್ದೋಯ್ದಿದ್ದ ಖದೀಮರು; ಬ್ಯಾಂಕ್ ದರೋಡೆಕೋರರ ಬಂಧನ

ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ‌ ಗ್ರಾಮೀಣ ಬ್ಯಾಂಕ್ ಲೂಟಿ‌ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಉತ್ತರ ಪ್ರದೇಶದ ಪೊಲೀಸರ ಸಹಕಾರದಿಂದ ಇಬ್ಬರು ಖದೀಮರನ್ನು ಗುರುವಾರ ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದಾರೆ.

ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್ ಬಂಧಿತ ಆರೋಪಿಗಳು.

ಟ್ರಕ್ ನಲ್ಲಿ ಬಂದು ಲೂಟಿ:

ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.

ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.

ಗ್ಯಾಸ್ ಕಟರ್ ಮೂಲಕ ಶೆಟರ್ ಹಾಗೂ ಲಾಕರ್ ತೆರೆದು 12 ಕೆ.ಜಿ. ಚಿನ್ನಾಭರಣ ಹಾಗೂ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಬಹಳ ದಿನಗಳಿಂದ ಹೊಂಚು ಹಾಕಿದ ಕಳ್ಳರು, ಬ್ಯಾಂಕ್ ಬಳಿ ಚಲನವಲನಗಳನ್ನು ಗಮನಿಸಿ ಕಳುವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ‌ ಸೆರೆಯಾಗಿದ್ದ ಟ್ರಕ್ ಪತ್ತೆ ಹಚ್ಚಿ ಹೋದ ಪೊಲೀಸರಿಗೆ ಆರೋಪಿಗಳ ಮಹತ್ವದ ಸುಳಿವು‌ ಸಿಕ್ಕಿದೆ. ಅಲಾಪುರದ ಕಾಕರಾಲ ಪೊಲೀಸರ ನೆರವು ಪಡೆದು, ಆರೋಪಿಗಳನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

5 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

6 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

6 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago