ತಾಲೂಕಿನ ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಲೂಟಿ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಉತ್ತರ ಪ್ರದೇಶದ ಪೊಲೀಸರ ಸಹಕಾರದಿಂದ ಇಬ್ಬರು ಖದೀಮರನ್ನು ಗುರುವಾರ ಉತ್ತರ ಪ್ರದೇಶದ ಬದಾಯೂನ್ ಜಿಲ್ಲೆಯ ಅಲಾಪುರ್ ನಲ್ಲಿ ಬಂಧಿಸಿದ್ದಾರೆ.
ಉತ್ತರಪ್ರದೇಶ ಮೂಲದ ಅಲಾಪುರ ನಿವಾಸಿ ಟ್ರಕ್ ಚಾಲಕ ಸರ್ತಾಜ್ ಹಾಗೂ ಉಜಾನಿಯ ನಿವಾಸಿ ಕಾಳಿಚರಣ್ ಬಂಧಿತ ಆರೋಪಿಗಳು.
ಟ್ರಕ್ ನಲ್ಲಿ ಬಂದು ಲೂಟಿ:
ನ.25 ರಂದು ಸಿನಿಮೀಯ ಶೈಲಿಯಲ್ಲಿ ಬ್ಯಾಂಕ್ ಲೂಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದಿಂದ ಪೂರ್ವನಿಯೋಜಿತವಾಗಿ ಕಳ್ಳತನ, ಬ್ಯಾಂಕ್, ಮನೆಗಳ ಲೂಟಿ ಮಾಡಲೆಂದೆ ಬೃಹತ್ ಟ್ರಕ್ ರೆಡಿ ಮಾಡಿಕೊಂಡಿದ್ದರು.
ಈ ಟ್ರಕ್ ನಲ್ಲಿ ಕಳ್ಳತನಕ್ಕೆ ಬಳಸುವ ಉಪಕರಣಗಳು ಎಲ್ಲವೂ ಸಿದ್ಧವಿದ್ದವು. ಗ್ಯಾಸ್ ಕಟರ್, ಸಿಲಿಂಡರ್ ಸೇರಿದಂತೆ ಹಲವು ಉಪಕರಣಗಳನ್ನು ಇಟ್ಟುಕೊಂಡು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ಕನ್ನ ಹಾಕಿದ್ದರು.
ಗ್ಯಾಸ್ ಕಟರ್ ಮೂಲಕ ಶೆಟರ್ ಹಾಗೂ ಲಾಕರ್ ತೆರೆದು 12 ಕೆ.ಜಿ. ಚಿನ್ನಾಭರಣ ಹಾಗೂ 15 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಬಹಳ ದಿನಗಳಿಂದ ಹೊಂಚು ಹಾಕಿದ ಕಳ್ಳರು, ಬ್ಯಾಂಕ್ ಬಳಿ ಚಲನವಲನಗಳನ್ನು ಗಮನಿಸಿ ಕಳುವು ಮಾಡಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಟ್ರಕ್ ಪತ್ತೆ ಹಚ್ಚಿ ಹೋದ ಪೊಲೀಸರಿಗೆ ಆರೋಪಿಗಳ ಮಹತ್ವದ ಸುಳಿವು ಸಿಕ್ಕಿದೆ. ಅಲಾಪುರದ ಕಾಕರಾಲ ಪೊಲೀಸರ ನೆರವು ಪಡೆದು, ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…