ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ 2023-24ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1(ಸಹಾಯಧನ ಗರಿಷ್ಠ ರೂ.1.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-2 (ಸಹಾಯಧನ ಗರಿಷ್ಠ ರೂ.2.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3-ಸ್ವಾವಲಂಬಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಸಹಾಯಧನ ಗರಿಷ್ಠ ರೂ.4.00 ಲಕ್ಷ), ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ), ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯುವ ಸಲುವಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು 2023 ಅಕ್ಟೋಬರ್ 31 ರಿಂದ ನವೆಂಬರ್ 29 ರವರೆಗೆ ಸಲ್ಲಿಸಬಹುದಾಗಿದೆ.

ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು. ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ. 2,00,000 ಮಿತಿಯೊಳಗಿರಬೇಕು.

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.

ಅರ್ಜಿದಾರರು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.‌ ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‌ಬುಕ್ ಪ್ರತಿ. ವಾಹನದ ಪರವಾನಗಿ.

ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್‌ಲೋಡ್ ಮಾಡಬೇಕು. ದೂರವಾಣಿ ಸಂಖ್ಯೆ:080-29781036 ಹಾಗೂ ನಿಗಮದ ವೆಬ್‌ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಾಂಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

48 minutes ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

1 hour ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

2 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

7 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

13 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago