ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ 2023-24ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1(ಸಹಾಯಧನ ಗರಿಷ್ಠ ರೂ.1.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-2 (ಸಹಾಯಧನ ಗರಿಷ್ಠ ರೂ.2.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3-ಸ್ವಾವಲಂಬಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಸಹಾಯಧನ ಗರಿಷ್ಠ ರೂ.4.00 ಲಕ್ಷ), ಮೈಕ್ರೋ ಕ್ರೆಡಿಟ್(ಪ್ರೇರಣಾ) (ಮಹಿಳಾ ಸ್ವ ಸಹಾಯ ಗುಂಪುಗಳಿಗೆ), ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯುವ ಸಲುವಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು 2023 ಅಕ್ಟೋಬರ್ 31 ರಿಂದ ನವೆಂಬರ್ 29 ರವರೆಗೆ ಸಲ್ಲಿಸಬಹುದಾಗಿದೆ.

ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು. ಅರ್ಜಿದಾರರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿದಾರರು ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000 ಹಾಗೂ ನಗರ ಪ್ರದೇಶವಾದಲ್ಲಿ ರೂ. 2,00,000 ಮಿತಿಯೊಳಗಿರಬೇಕು.

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ನಿಗಮಗಳಿಂದ ಈ ಹಿಂದೆ ಸಾಲ ಸೌಲಭ್ಯ ಪಡೆದಿರಬಾರದು.

ಅರ್ಜಿದಾರರು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾದ ದಾಖಲಾತಿಗಳ ವಿವರ: ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಆರ್.ಡಿ ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ.‌ ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್‌ಬುಕ್ ಪ್ರತಿ. ವಾಹನದ ಪರವಾನಗಿ.

ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.

ಅರ್ಹ ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಅಪ್‌ಲೋಡ್ ಮಾಡಬೇಕು. ದೂರವಾಣಿ ಸಂಖ್ಯೆ:080-29781036 ಹಾಗೂ ನಿಗಮದ ವೆಬ್‌ಸೈಟ್ ನಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಾಂಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago