ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೆಸರು ಹೈಜಾಕ್ ಆರೋಪ: ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.

ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.

ಇದೇ ವೇಳೆ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಬಸವರಾಜು ನೆಲಮಂಗಲ, ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನ ಎಂ.ಗುರುಮೂರ್ತಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಂಘಟಿಸುವ ಮೂಲಕ ಬಲಿಷ್ಠ ಸಂಘಟನೆಯನ್ನಾಗಿ ಮಾಡಿದ್ದಾರೆ, ಸಂಘಟನೆ ಹಕ್ಕುದಾರಿಕೆಗಾಗಿ 11 ವರ್ಷಗಳ ಹೋರಾಟವನ್ನ ಮಾಡಿದ್ದಾರೆ, ಶಿವಮೊಗ್ಗ ಸಿವಿಲ್ ಕೋರ್ಟ್ , ಭದ್ರಾವತಿ ಸಿವಿಲ್ ಕೋರ್ಟ್ ಮತ್ತು ಹೈಕೋರ್ಟ್ ನಲ್ಲಿ ಸಂಘಟನೆಯೂ ಗುರುಮೂರ್ತಿಯವರಿಗೆ ಸೇರಿದ್ದು ಎಂದು ತೀರ್ಪು ನೀಡಲಾಗಿದೆ ಎಂದರು.

ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.

Ramesh Babu

Journalist

Recent Posts

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

25 minutes ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

1 hour ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

11 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

12 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

13 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

13 hours ago