ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೆಸರು ಹೈಜಾಕ್ ಆರೋಪ: ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.

ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.

ಇದೇ ವೇಳೆ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಬಸವರಾಜು ನೆಲಮಂಗಲ, ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನ ಎಂ.ಗುರುಮೂರ್ತಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಂಘಟಿಸುವ ಮೂಲಕ ಬಲಿಷ್ಠ ಸಂಘಟನೆಯನ್ನಾಗಿ ಮಾಡಿದ್ದಾರೆ, ಸಂಘಟನೆ ಹಕ್ಕುದಾರಿಕೆಗಾಗಿ 11 ವರ್ಷಗಳ ಹೋರಾಟವನ್ನ ಮಾಡಿದ್ದಾರೆ, ಶಿವಮೊಗ್ಗ ಸಿವಿಲ್ ಕೋರ್ಟ್ , ಭದ್ರಾವತಿ ಸಿವಿಲ್ ಕೋರ್ಟ್ ಮತ್ತು ಹೈಕೋರ್ಟ್ ನಲ್ಲಿ ಸಂಘಟನೆಯೂ ಗುರುಮೂರ್ತಿಯವರಿಗೆ ಸೇರಿದ್ದು ಎಂದು ತೀರ್ಪು ನೀಡಲಾಗಿದೆ ಎಂದರು.

ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.

Ramesh Babu

Journalist

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

5 hours ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

6 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

7 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

19 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

20 hours ago