ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೆಸರು ಹೈಜಾಕ್ ಆರೋಪ: ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.

ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.

ಇದೇ ವೇಳೆ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಬಸವರಾಜು ನೆಲಮಂಗಲ, ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನ ಎಂ.ಗುರುಮೂರ್ತಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಂಘಟಿಸುವ ಮೂಲಕ ಬಲಿಷ್ಠ ಸಂಘಟನೆಯನ್ನಾಗಿ ಮಾಡಿದ್ದಾರೆ, ಸಂಘಟನೆ ಹಕ್ಕುದಾರಿಕೆಗಾಗಿ 11 ವರ್ಷಗಳ ಹೋರಾಟವನ್ನ ಮಾಡಿದ್ದಾರೆ, ಶಿವಮೊಗ್ಗ ಸಿವಿಲ್ ಕೋರ್ಟ್ , ಭದ್ರಾವತಿ ಸಿವಿಲ್ ಕೋರ್ಟ್ ಮತ್ತು ಹೈಕೋರ್ಟ್ ನಲ್ಲಿ ಸಂಘಟನೆಯೂ ಗುರುಮೂರ್ತಿಯವರಿಗೆ ಸೇರಿದ್ದು ಎಂದು ತೀರ್ಪು ನೀಡಲಾಗಿದೆ ಎಂದರು.

ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

11 minutes ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

41 minutes ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

13 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

15 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

15 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

24 hours ago