ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೆಸರು ಹೈಜಾಕ್ ಆರೋಪ: ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.

ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.

ಇದೇ ವೇಳೆ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಬಸವರಾಜು ನೆಲಮಂಗಲ, ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನ ಎಂ.ಗುರುಮೂರ್ತಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಂಘಟಿಸುವ ಮೂಲಕ ಬಲಿಷ್ಠ ಸಂಘಟನೆಯನ್ನಾಗಿ ಮಾಡಿದ್ದಾರೆ, ಸಂಘಟನೆ ಹಕ್ಕುದಾರಿಕೆಗಾಗಿ 11 ವರ್ಷಗಳ ಹೋರಾಟವನ್ನ ಮಾಡಿದ್ದಾರೆ, ಶಿವಮೊಗ್ಗ ಸಿವಿಲ್ ಕೋರ್ಟ್ , ಭದ್ರಾವತಿ ಸಿವಿಲ್ ಕೋರ್ಟ್ ಮತ್ತು ಹೈಕೋರ್ಟ್ ನಲ್ಲಿ ಸಂಘಟನೆಯೂ ಗುರುಮೂರ್ತಿಯವರಿಗೆ ಸೇರಿದ್ದು ಎಂದು ತೀರ್ಪು ನೀಡಲಾಗಿದೆ ಎಂದರು.

ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

4 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

6 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

13 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago