ಕರ್ನಾಟಕ ದಲಿತ ಸಂಘರ್ಷ ಸಮಿತಿ ಹೆಸರು ಹೈಜಾಕ್ ಆರೋಪ: ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.

ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.

ಇದೇ ವೇಳೆ ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಬಸವರಾಜು ನೆಲಮಂಗಲ, ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನ ಎಂ.ಗುರುಮೂರ್ತಿಯವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಂಘಟಿಸುವ ಮೂಲಕ ಬಲಿಷ್ಠ ಸಂಘಟನೆಯನ್ನಾಗಿ ಮಾಡಿದ್ದಾರೆ, ಸಂಘಟನೆ ಹಕ್ಕುದಾರಿಕೆಗಾಗಿ 11 ವರ್ಷಗಳ ಹೋರಾಟವನ್ನ ಮಾಡಿದ್ದಾರೆ, ಶಿವಮೊಗ್ಗ ಸಿವಿಲ್ ಕೋರ್ಟ್ , ಭದ್ರಾವತಿ ಸಿವಿಲ್ ಕೋರ್ಟ್ ಮತ್ತು ಹೈಕೋರ್ಟ್ ನಲ್ಲಿ ಸಂಘಟನೆಯೂ ಗುರುಮೂರ್ತಿಯವರಿಗೆ ಸೇರಿದ್ದು ಎಂದು ತೀರ್ಪು ನೀಡಲಾಗಿದೆ ಎಂದರು.

ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

5 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago