ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ, ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರು ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ.
ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆಯನ್ನ ನಡೆಸಿದರು.
ತಾಲೂಕು ಅಧ್ಯಕ್ಷರಾದ ರಾಮಮೂರ್ತಿ ನೆರಳಘಟ್ಟ ಮಾತನಾಡಿ, ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿಯನ್ನ ಮಾಡಿದ್ದೇವು, ಸಮಾಜದಲ್ಲಿ ಬಿರುಕು ಮೂಡಿಸಲು ಮತ್ತು ಸಂಘಟನೆಗೆ ಕೆಟ್ಟ ಹೆಸರು ತರಬೇಡಿ ಎಂದು ವಿನಂತಿ ಮಾಡಿದ್ದೇವು.ಆದರೆ ಹೆಣ್ಣೂರು ಶ್ರೀನಿವಾಸ್ ಉಡಾಫೆಯ ಮಾತುಗಳನ್ನಾಡಿದ್ದಾರು, ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು, ಬ್ಯಾನರ್ ತೆಗೆಯುವರೆಗೂ ಪ್ರತಿಭಟನೆ ನಡೆಸುವುದ್ದಾಗಿ ಎಚ್ಚರಿಸಿದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…