ಇತ್ತೀಚೆಗೆ ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಕನ್ನಡಿಗರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ರಾಜ್ಯ ಸರಕಾರ ಮುಂದಾಗಲಿ ಎಂಬ ಕಾರಣಕ್ಕೆ ಹಲವು ಸಂಘಟನೆಗಳು ಇಂದು (ಮಾ.22) ಕರ್ನಾಟಕ ಬಂದ್ ಆಚರಣೆ ಮಾಡಲಾಗಿತ್ತಿದೆ.
ಇಂದು ಕರ್ನಾಟಕ ಬಂದ್ ಆಚರಣೆ ಹಿನ್ನೆಲೆ ದೊಡ್ಡಬಳ್ಳಾಪುರ ನಗರಕ್ಕೂ ಬಂದ್ ಬಿಸಿ ಅಲ್ಪ ಮಟ್ಟಿಗೆ ತಟ್ಟಿದೆ. ಸದಾ ಗಿಜುಗುಡುತ್ತಿದ್ದ ನಗರದ ಹೃದಯ ಭಾಗ ಹಳೇ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ.
ಯುಗಾದಿ ಹಬ್ಬ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬಹಳಷ್ಟು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಕಾರಣ ಬಂದ್ ಕೈ ಬಿಡಲು ನಿರ್ಧಾರ ಮಾಡಿ, ನಗರದ ಅಂಬೇಡ್ಕರ್ ಪ್ರತಿಮೆ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…