ಕರ್ನಾಟಕ ಮಹಿಳಾ ಯಕ್ಷಗಾನ ತಂಡಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಬೆಂಗಳೂರಿನಲ್ಲಿ ಹುಟ್ಟಿಕೊಂಡ ಮೊದಲ ಯಕ್ಷಗಾನ ಮಹಿಳಾ ತಂಡ ‘ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು’ ಈ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಅವರ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಉದ್ಘಾಟಿಸಿದರು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು.

ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ವಿಶೇಷವಾಗಿ ಸಂಸ್ಥೆಯ ಮಕ್ಕಳಿಂದ ಆಂಗ್ಲಭಾಷೆಯಲ್ಲಿ ಕಂಸವಧೆ ಎನ್ನುವ ಯಕ್ಷಗಾನ, ತೆಂಕುತಿಟ್ಟಿನಲ್ಲಿ ಖ್ಯಾತ ಮಹಿಳಾ ಭಾಗವತರಾದ ಅಮೃತಾ ಅಡಿಗ ಇವರ ಸಿರಿಕಂಠದಲ್ಲಿ ‘ಸುದರ್ಶನ ವಿಜಯ’ ಪ್ರಸಂಗ, ಬಡಗುತಿಟ್ಟಿನ ಖ್ಯಾತ ಮಹಿಳಾ ಭಾಗವತರಾದ ಚಿಂತನಾ ಹೆಗಡೆ ಇವರ ಸಿರಿಕಂಠದಲ್ಲಿ ‘ವೀರ ಅಭಿಮನ್ಯು’ ಯಕ್ಷಗಾನ ಯಕ್ಷಪ್ರೇಮಿಗಳನ್ನು ರಂಜಿಸಿತು.

ಈ ಸಂದರ್ಭದಲ್ಲಿ 14 ಯಕ್ಷಗಾನ ಗುರುಗಳಿಗೆ ‘ಕರ್ನಾಟಕ ಯಕ್ಷ ಗುರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಎಲ್ಲಾ ಕಾರ್ಯಕ್ರಮ ಮಹಿಳೆಯರಿಂದ ನಡೆದಿದ್ದು ವಿಶೇಷ ಆಕರ್ಷಣೆಯಾಗಿತ್ತು.ಸಭಾಕಾರ್ಯಕ್ರಮದಲ್ಲಿ ದೂರದರ್ಶನ, ಆಕಾಶವಾಣಿಯ ನಿರ್ದೇಶಕರಾದ ನಿರ್ಮಲ ಎಲಿಗಾರ್, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ತೇಜಸ್ವಿನಿ ಅನಂತ್ ಕುಮಾರ್, ಹಿರಿಯ ಪತ್ರಕರ್ತ ಡಾ. ಈಶ್ವರ್ ದೈತೋಟ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ವಿಕಾಸ್ ಗ್ಲೋಬಲ್ ಸೋಲ್ಯುಷನ್ಸ್ ನ ಅಧ್ಯಕ್ಷರಾದ ಡಿ.ವಿ ವೆಂಕಟಾಚಲಪತಿ,ಜಿ. ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

3 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

3 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

6 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

9 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

21 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

22 hours ago