ಕರ್ನಾಟಕ ಮಹಿಳಾ ಯಕ್ಷಗಾನ ತಂಡಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಬೆಂಗಳೂರಿನಲ್ಲಿ ಹುಟ್ಟಿಕೊಂಡ ಮೊದಲ ಯಕ್ಷಗಾನ ಮಹಿಳಾ ತಂಡ ‘ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು’ ಈ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಅವರ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಉದ್ಘಾಟಿಸಿದರು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು.

ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ವಿಶೇಷವಾಗಿ ಸಂಸ್ಥೆಯ ಮಕ್ಕಳಿಂದ ಆಂಗ್ಲಭಾಷೆಯಲ್ಲಿ ಕಂಸವಧೆ ಎನ್ನುವ ಯಕ್ಷಗಾನ, ತೆಂಕುತಿಟ್ಟಿನಲ್ಲಿ ಖ್ಯಾತ ಮಹಿಳಾ ಭಾಗವತರಾದ ಅಮೃತಾ ಅಡಿಗ ಇವರ ಸಿರಿಕಂಠದಲ್ಲಿ ‘ಸುದರ್ಶನ ವಿಜಯ’ ಪ್ರಸಂಗ, ಬಡಗುತಿಟ್ಟಿನ ಖ್ಯಾತ ಮಹಿಳಾ ಭಾಗವತರಾದ ಚಿಂತನಾ ಹೆಗಡೆ ಇವರ ಸಿರಿಕಂಠದಲ್ಲಿ ‘ವೀರ ಅಭಿಮನ್ಯು’ ಯಕ್ಷಗಾನ ಯಕ್ಷಪ್ರೇಮಿಗಳನ್ನು ರಂಜಿಸಿತು.

ಈ ಸಂದರ್ಭದಲ್ಲಿ 14 ಯಕ್ಷಗಾನ ಗುರುಗಳಿಗೆ ‘ಕರ್ನಾಟಕ ಯಕ್ಷ ಗುರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಎಲ್ಲಾ ಕಾರ್ಯಕ್ರಮ ಮಹಿಳೆಯರಿಂದ ನಡೆದಿದ್ದು ವಿಶೇಷ ಆಕರ್ಷಣೆಯಾಗಿತ್ತು.ಸಭಾಕಾರ್ಯಕ್ರಮದಲ್ಲಿ ದೂರದರ್ಶನ, ಆಕಾಶವಾಣಿಯ ನಿರ್ದೇಶಕರಾದ ನಿರ್ಮಲ ಎಲಿಗಾರ್, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ತೇಜಸ್ವಿನಿ ಅನಂತ್ ಕುಮಾರ್, ಹಿರಿಯ ಪತ್ರಕರ್ತ ಡಾ. ಈಶ್ವರ್ ದೈತೋಟ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ವಿಕಾಸ್ ಗ್ಲೋಬಲ್ ಸೋಲ್ಯುಷನ್ಸ್ ನ ಅಧ್ಯಕ್ಷರಾದ ಡಿ.ವಿ ವೆಂಕಟಾಚಲಪತಿ,ಜಿ. ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

10 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago