ಕರ್ನಾಟಕ ಮಹಿಳಾ ಯಕ್ಷಗಾನ ತಂಡಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಬೆಂಗಳೂರಿನಲ್ಲಿ ಹುಟ್ಟಿಕೊಂಡ ಮೊದಲ ಯಕ್ಷಗಾನ ಮಹಿಳಾ ತಂಡ ‘ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು’ ಈ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಅವರ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಉದ್ಘಾಟಿಸಿದರು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು.

ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ವಿಶೇಷವಾಗಿ ಸಂಸ್ಥೆಯ ಮಕ್ಕಳಿಂದ ಆಂಗ್ಲಭಾಷೆಯಲ್ಲಿ ಕಂಸವಧೆ ಎನ್ನುವ ಯಕ್ಷಗಾನ, ತೆಂಕುತಿಟ್ಟಿನಲ್ಲಿ ಖ್ಯಾತ ಮಹಿಳಾ ಭಾಗವತರಾದ ಅಮೃತಾ ಅಡಿಗ ಇವರ ಸಿರಿಕಂಠದಲ್ಲಿ ‘ಸುದರ್ಶನ ವಿಜಯ’ ಪ್ರಸಂಗ, ಬಡಗುತಿಟ್ಟಿನ ಖ್ಯಾತ ಮಹಿಳಾ ಭಾಗವತರಾದ ಚಿಂತನಾ ಹೆಗಡೆ ಇವರ ಸಿರಿಕಂಠದಲ್ಲಿ ‘ವೀರ ಅಭಿಮನ್ಯು’ ಯಕ್ಷಗಾನ ಯಕ್ಷಪ್ರೇಮಿಗಳನ್ನು ರಂಜಿಸಿತು.

ಈ ಸಂದರ್ಭದಲ್ಲಿ 14 ಯಕ್ಷಗಾನ ಗುರುಗಳಿಗೆ ‘ಕರ್ನಾಟಕ ಯಕ್ಷ ಗುರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಎಲ್ಲಾ ಕಾರ್ಯಕ್ರಮ ಮಹಿಳೆಯರಿಂದ ನಡೆದಿದ್ದು ವಿಶೇಷ ಆಕರ್ಷಣೆಯಾಗಿತ್ತು.ಸಭಾಕಾರ್ಯಕ್ರಮದಲ್ಲಿ ದೂರದರ್ಶನ, ಆಕಾಶವಾಣಿಯ ನಿರ್ದೇಶಕರಾದ ನಿರ್ಮಲ ಎಲಿಗಾರ್, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ತೇಜಸ್ವಿನಿ ಅನಂತ್ ಕುಮಾರ್, ಹಿರಿಯ ಪತ್ರಕರ್ತ ಡಾ. ಈಶ್ವರ್ ದೈತೋಟ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ವಿಕಾಸ್ ಗ್ಲೋಬಲ್ ಸೋಲ್ಯುಷನ್ಸ್ ನ ಅಧ್ಯಕ್ಷರಾದ ಡಿ.ವಿ ವೆಂಕಟಾಚಲಪತಿ,ಜಿ. ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago