ಕರ್ನಾಟಕ ಮಹಿಳಾ ಯಕ್ಷಗಾನ ತಂಡಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಬೆಂಗಳೂರಿನಲ್ಲಿ ಹುಟ್ಟಿಕೊಂಡ ಮೊದಲ ಯಕ್ಷಗಾನ ಮಹಿಳಾ ತಂಡ ‘ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು’ ಈ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಅವರ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಉದ್ಘಾಟಿಸಿದರು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು.

ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ವಿಶೇಷವಾಗಿ ಸಂಸ್ಥೆಯ ಮಕ್ಕಳಿಂದ ಆಂಗ್ಲಭಾಷೆಯಲ್ಲಿ ಕಂಸವಧೆ ಎನ್ನುವ ಯಕ್ಷಗಾನ, ತೆಂಕುತಿಟ್ಟಿನಲ್ಲಿ ಖ್ಯಾತ ಮಹಿಳಾ ಭಾಗವತರಾದ ಅಮೃತಾ ಅಡಿಗ ಇವರ ಸಿರಿಕಂಠದಲ್ಲಿ ‘ಸುದರ್ಶನ ವಿಜಯ’ ಪ್ರಸಂಗ, ಬಡಗುತಿಟ್ಟಿನ ಖ್ಯಾತ ಮಹಿಳಾ ಭಾಗವತರಾದ ಚಿಂತನಾ ಹೆಗಡೆ ಇವರ ಸಿರಿಕಂಠದಲ್ಲಿ ‘ವೀರ ಅಭಿಮನ್ಯು’ ಯಕ್ಷಗಾನ ಯಕ್ಷಪ್ರೇಮಿಗಳನ್ನು ರಂಜಿಸಿತು.

ಈ ಸಂದರ್ಭದಲ್ಲಿ 14 ಯಕ್ಷಗಾನ ಗುರುಗಳಿಗೆ ‘ಕರ್ನಾಟಕ ಯಕ್ಷ ಗುರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಎಲ್ಲಾ ಕಾರ್ಯಕ್ರಮ ಮಹಿಳೆಯರಿಂದ ನಡೆದಿದ್ದು ವಿಶೇಷ ಆಕರ್ಷಣೆಯಾಗಿತ್ತು.ಸಭಾಕಾರ್ಯಕ್ರಮದಲ್ಲಿ ದೂರದರ್ಶನ, ಆಕಾಶವಾಣಿಯ ನಿರ್ದೇಶಕರಾದ ನಿರ್ಮಲ ಎಲಿಗಾರ್, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ತೇಜಸ್ವಿನಿ ಅನಂತ್ ಕುಮಾರ್, ಹಿರಿಯ ಪತ್ರಕರ್ತ ಡಾ. ಈಶ್ವರ್ ದೈತೋಟ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ವಿಕಾಸ್ ಗ್ಲೋಬಲ್ ಸೋಲ್ಯುಷನ್ಸ್ ನ ಅಧ್ಯಕ್ಷರಾದ ಡಿ.ವಿ ವೆಂಕಟಾಚಲಪತಿ,ಜಿ. ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

40 minutes ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

3 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

22 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago