ಕರ್ನಾಟಕ ಮಹಿಳಾ ಯಕ್ಷಗಾನ ತಂಡಕ್ಕೆ ಬೆಳ್ಳಿ ಹಬ್ಬದ ಸಂಭ್ರಮ

ಬೆಂಗಳೂರಿನಲ್ಲಿ ಹುಟ್ಟಿಕೊಂಡ ಮೊದಲ ಯಕ್ಷಗಾನ ಮಹಿಳಾ ತಂಡ ‘ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು’ ಈ ಸಂಸ್ಥೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಅವರ ವತಿಯಿಂದ ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಉದ್ಘಾಟಿಸಿದರು. ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕೋಟ ಶಿವರಾಮ ಕಾರಂತರು ನಿರ್ದೇಶಿಸಿದ ಯಕ್ಷಗಾನ ಬ್ಯಾಲೆ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು.

ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ವಿಶೇಷವಾಗಿ ಸಂಸ್ಥೆಯ ಮಕ್ಕಳಿಂದ ಆಂಗ್ಲಭಾಷೆಯಲ್ಲಿ ಕಂಸವಧೆ ಎನ್ನುವ ಯಕ್ಷಗಾನ, ತೆಂಕುತಿಟ್ಟಿನಲ್ಲಿ ಖ್ಯಾತ ಮಹಿಳಾ ಭಾಗವತರಾದ ಅಮೃತಾ ಅಡಿಗ ಇವರ ಸಿರಿಕಂಠದಲ್ಲಿ ‘ಸುದರ್ಶನ ವಿಜಯ’ ಪ್ರಸಂಗ, ಬಡಗುತಿಟ್ಟಿನ ಖ್ಯಾತ ಮಹಿಳಾ ಭಾಗವತರಾದ ಚಿಂತನಾ ಹೆಗಡೆ ಇವರ ಸಿರಿಕಂಠದಲ್ಲಿ ‘ವೀರ ಅಭಿಮನ್ಯು’ ಯಕ್ಷಗಾನ ಯಕ್ಷಪ್ರೇಮಿಗಳನ್ನು ರಂಜಿಸಿತು.

ಈ ಸಂದರ್ಭದಲ್ಲಿ 14 ಯಕ್ಷಗಾನ ಗುರುಗಳಿಗೆ ‘ಕರ್ನಾಟಕ ಯಕ್ಷ ಗುರು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಎಲ್ಲಾ ಕಾರ್ಯಕ್ರಮ ಮಹಿಳೆಯರಿಂದ ನಡೆದಿದ್ದು ವಿಶೇಷ ಆಕರ್ಷಣೆಯಾಗಿತ್ತು.ಸಭಾಕಾರ್ಯಕ್ರಮದಲ್ಲಿ ದೂರದರ್ಶನ, ಆಕಾಶವಾಣಿಯ ನಿರ್ದೇಶಕರಾದ ನಿರ್ಮಲ ಎಲಿಗಾರ್, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ತೇಜಸ್ವಿನಿ ಅನಂತ್ ಕುಮಾರ್, ಹಿರಿಯ ಪತ್ರಕರ್ತ ಡಾ. ಈಶ್ವರ್ ದೈತೋಟ, ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ವಿಕಾಸ್ ಗ್ಲೋಬಲ್ ಸೋಲ್ಯುಷನ್ಸ್ ನ ಅಧ್ಯಕ್ಷರಾದ ಡಿ.ವಿ ವೆಂಕಟಾಚಲಪತಿ,ಜಿ. ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

18 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago