ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳ ಅನಾವರಣ: ಪುನೀತ್ ರಾಜ್ ಕುಮಾರ್ ಎಲ್ಲರ ಮನೆ ಮನೆಯ ಮಗ- ಸಿಎಂ‌ ಸಿದ್ದರಾಮಯ್ಯ

ಪುನೀತ್ ರಾಜ್ ಕುಮಾರ್ ಅವರ ಸ್ಮಾರಕ  ಪುನರಾಭಿವೃದ್ಧಿ ಸಂಬಂಧ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಾಡಿರುವ ಮನವಿಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ನನಗೂ ಪುನೀತ್ ರಾಜ್‌ಕುಮಾರ್ ಅವರು ಬಹಳ ಗೌರವದಿಂದ ಕಾಣುತ್ತಿದ್ದರು. ದೊಡ್ಡವರನ್ನು, ಸಹಕಲಾವಿದರನ್ನು ಗೌರವದಿಂದ ಕಾಣುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಕಿರಿಯ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರನ್ನು ಕಳೆದುಕೊಂಡಿರುವುದು ಇಡೀ ಕರುನಾಡಿಗೆ ಆಗಿರುವ ನಷ್ಟ. ಆ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಉತ್ತಮ ನಟ ಹಾಗೂ ಮಾನವೀಯತೆಯುಳ್ಳ ವ್ಯಕ್ತಿಯನ್ನು ನಾಡು ಕಳೆದುಕೊಂಡಿದೆ. ಅವರ ಪ್ರತಿಮೆಯಿಂದ ಪುನೀತ್ ಅವರನ್ನು ಇನ್ನಷ್ಟು ಸ್ಮರಿಸುವ ಕೆಲಸವಾಗಿದೆ ಎಂದರು.

ರಾಜ್‌ಕುಮಾರ್ ಕುಟುಂಬದವರು ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ. ಕೆಟ್ಟ ಪದ ಬಳಸಿಲ್ಲ. ಪುನೀತ್ ರಾಜಕುಮಾರ್ ಅವರ ತಂದೆ ರಾಜ್‌ಕುಮಾರ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದರು. ರಾಜ್ ಕುಮಾರ್ ಜನಪ್ರಿಯ ಮೇರು ನಟ. ಪುನೀತ್ ತೀರಿಕೊಂಡಾಗ ಜನರ ಭಾವನೆಗಳನ್ನು ಕಂಡಾಗ, ರಾಜ್‌ಕುಮಾರ್ ಅವರಿಗಿಂತಲೂ ಜನಪ್ರಿಯರಾಗಿದ್ದರು ಎಂಬ ಭಾವನೆ ಬಂದಿತು. ಪುನೀತ್ ಮರಣ ಹೊಂದಿದಾಗ ನಮ್ಮ ಮನೆಯಲ್ಲಿಯೇ ಯಾರೋ ಒಬ್ಬರು ತೀರಿಕೊಂಡಿದ್ದಾರೆ ಎಂಬಂತಿತ್ತು. ಎಲ್ಲಾ ಊರುಗಳಲ್ಲಿ ಪ್ರತಿಮೆ ಸ್ಥಾಪಿಸಿ, ಕಟೌಟ್ ಹಾಕಿ ಗೋಳಾಡಿದ್ದು ಕಂಡಾಗ ಪುನೀತ್ ಅವರ ಜನಪ್ರಿಯತೆ, ಅಪಾರ ಅಭಿಮಾನಿಗಳನ್ನು ಪಡೆದಿದ್ದರು ಎಂದು ತಿಳಿಯುತ್ತದೆ. ಬಹಳ ಬೇಗ ನಮ್ಮನ್ನು ಅಗಲಿದರು. ಅವರು ಬದುಕಿದ್ದರೆ, ನಾವು ನಿರೀಕ್ಷೆ ಮಾಡದಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರು ಎಂದರು.

ಅಪ್ಪು ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ನೋವನ್ನು ಭರಿಸುವ ಶಕ್ತಿ ದೇವರು ಯಾವಾಗಲೂ ನೀಡಬೇಕು. ಪುನೀತ್ ರಾಜ್ ಕುಮಾರ್ ಮನೆ ಮನೆಯ ಮಗ. ಅವರನ್ನು ಗೌರವಿಸದವರೇ ಇಲ್ಲ. ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆಯನ್ನು ಇಂದು ಅನಾವರಣ ಮಾಡಲಾಗಿದೆ. ಡಾ.ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿತ್ವ. ಸರಳತೆ, ಸಜ್ಜನಿಕೆ, ವಿನಯ ಎಲ್ಲವನ್ನೂ ಒಬ್ಬರಲ್ಲೆ ಕಾಣುವುದು ವಿರಳ. ಸಾಮಾನ್ಯ ಜನರು, ಸಂಕಷ್ಟದಲ್ಲಿದವರಿಗೆ ಸ್ಪಂದಿಸುವ ಉದಾತ್ತ ಭಾವನೆಯ ಪುನೀತ್‍ರಿಗಿದ್ದ ಅಭಿಮಾನಿ ಬಳಗ ಬಹಳ ದೊಡ್ಡದು. ಅವರು ಅಕಾಲಿಕ ಮರಣಕ್ಕೆ ತುತ್ತಾಗಿದ್ದಾಗ ಜನರು ತಮ್ಮ ಮನೆಯ ಸದಸ್ಯನನ್ನೇ ಕಳೆದುಕೊಂಡಷ್ಟು ದು:ಖಿಸಿದ್ದರು. ಕರ್ನಾಟಕ ಜನರ ಮನಸ್ಸನ್ನು ಗೆದಿದ್ದರು ಎಂದು ಹೇಳಿದರು.

ರಾಜ್ಯದ ಪ್ರತಿ ಮನೆಯಲ್ಲಿಯೂ ಕುಡ ಪುನೀತ್ ರ ಭಾವಚಿತ್ರವಿದ್ದು, ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಬಹುಶ: ಇನ್ನೊಬ್ಬ ಪುನೀತ್ ರಂಥ ವ್ಯಕ್ತಿಯನ್ನು ಕಾಣುವುದು ಕಷ್ಟ. ರಾಜಕುಮಾರ್ ಕುಟುಂಬದವರು ಸದಾ ವಿನಯವಂತರು. ರಾಜಕುಮಾರ್, ಅವರ ಮಕ್ಕಳು ಮಾನವೀಯತೆಯ ಪ್ರತಿರೂಪವಾಗಿದ್ದಾರೆ. ಮಾನವೀಯತೆಯುಳ್ಳವರು ಮತ್ತೊಬ್ಬರನ್ನು ಪ್ರೀತಿ ಗೌರವಗಳಿಂದ ಕಾಣುತ್ತಾರೆ. ರಾಜ್ ಕುಮಾರ್ ಸೇರಿದಂತೆ ಅವರ ಕುಟುಂಬದವರೊಂದಿಗೆ ನನಗೆ ಬಹಳ ವರ್ಷಗಳಿಂದಲೂ ಉತ್ತಮ ಒಡನಾಟವಿದೆ ಎಂದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

4 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

4 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

9 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

21 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

24 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago