ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.
ಮೃತರಿಗೆ ಮೂರು ಜನ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಿಂಪಾಡಿಪುರದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.
50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ.
ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…