ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ಪೆನ್ನ ಓಬಳಯ್ಯ ವಿಧಿವಶ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.

ಮೃತರಿಗೆ ಮೂರು ಜನ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ‌. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಿಂಪಾಡಿಪುರದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ‌ ತಾಲ್ಲೂಕಿನ ಮಧುರೆ ಹೋಬಳಿಯ   ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.

50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ.

ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 hour ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 hour ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago