ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಆ.31ಕ್ಕೆ ಕೊನೆ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ  ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಯುಜಿ ಶಿಕ್ಷಣ ಕ್ರಮಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು 2023 ರ ಜೂನ್ 28 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ ಬಾಪೂಜಿನಗರ-01 ಆನ್‌ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗಿದೆ.

ವಿದ್ಯಾರ್ಥಿಗಳು ವಿವರಣಾ ಪುಸ್ತಕ ಅನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ವೆಬ್ ಸೈಟ್ ನಲ್ಲಿ ಲಭ್ಯವಿರುವ ಆನ್ ಲೈನ್ ಅಡ್ಮಿಶನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ.

ಕೋರ್ಸ್ ಗಳ ಪ್ರವೇಶಾತಿ ಗಾಗಿ 2023ರ ಆಗಸ್ಟ್ 31 ಕೊನೆ ದಿನವಾಗಿದೆ.

ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಹಾಗೂ ಇನ್ನು ಅರ್ಜಿ ಹಾಕಿಲ್ಲದೆ ಇರುವಂತಹ ಆಸಕ್ತ ವಿದ್ಯಾರ್ಥಿಗಳು ಕಡೆ ದಿನಾಂಕ ದೊಳಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವುದು.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಸ್ಯಾಟ್ ಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-28, ಕಚೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಆಹ್ವಾನ

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

28 minutes ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

38 minutes ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

2 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

2 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

5 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

13 hours ago