ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಆ.31ಕ್ಕೆ ಕೊನೆ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ  ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಯುಜಿ ಶಿಕ್ಷಣ ಕ್ರಮಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು 2023 ರ ಜೂನ್ 28 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ ಬಾಪೂಜಿನಗರ-01 ಆನ್‌ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗಿದೆ.

ವಿದ್ಯಾರ್ಥಿಗಳು ವಿವರಣಾ ಪುಸ್ತಕ ಅನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ವೆಬ್ ಸೈಟ್ ನಲ್ಲಿ ಲಭ್ಯವಿರುವ ಆನ್ ಲೈನ್ ಅಡ್ಮಿಶನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ.

ಕೋರ್ಸ್ ಗಳ ಪ್ರವೇಶಾತಿ ಗಾಗಿ 2023ರ ಆಗಸ್ಟ್ 31 ಕೊನೆ ದಿನವಾಗಿದೆ.

ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಹಾಗೂ ಇನ್ನು ಅರ್ಜಿ ಹಾಕಿಲ್ಲದೆ ಇರುವಂತಹ ಆಸಕ್ತ ವಿದ್ಯಾರ್ಥಿಗಳು ಕಡೆ ದಿನಾಂಕ ದೊಳಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವುದು.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಸ್ಯಾಟ್ ಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-28, ಕಚೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಆಹ್ವಾನ

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

13 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

18 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago